Advertisement

ನರೇಂದ್ರ ಮೋದಿ ರ್ಯಾಲಿ ಸ್ಥಳದಿಂದ 12 ಕಿ.ಮೀ ದೂರದಲ್ಲಿ ಸ್ಫೋಟ; ಕಟ್ಟೆಚ್ಚರ

09:01 AM Apr 24, 2022 | Team Udayavani |

ಶ್ರೀನಗರ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಜಮ್ಮುವಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಮಾಡಲಾಗಿದೆ. ಈ ನಡುವೆ ನರೇಂದ್ರ ಮೋದಿ ರ್ಯಾಲಿ ನಡೆಯಲಿರುವ ಸ್ಥಳದಿಂದ ಕೇವಲ 12 ಕಿ.ಮೀ ದೂರದಲ್ಲಿ ಸ್ಫೋಟವೊಂದು ಸಂಭವಿಸಿದೆ.

Advertisement

ಜಮ್ಮು ಜಿಲ್ಲೆಯ ಲಾಲಿಯಾನ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟದ ಸ್ವರೂಪದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಆರೋಪಿಗಳಿಗೆ ಜಾಮೀನು ಕೊಡಿಸಲು ಸರಕಾರಿ ಕಚೇರಿ ಸೀಲ್‌ ನಕಲು: 9 ಸೆರೆ

“ಇದು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ತೋರುತ್ತಿಲ್ಲ. ವಿವರಗಳನ್ನು ಕಂಡುಹಿಡಿಯಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಮೋದಿ ಭೇಟಿ: ಜಮ್ಮು ವಿಭಾಗದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್‌ನಲ್ಲಿ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶಾದ್ಯಂತ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Advertisement

ಬನಿಹಾಲ್‌- ಖಾಜಿಗುಂಡ್‌ ನಡುವೆ ಸರ್ವ ಋತುಗಳಲ್ಲೂ ಸಂಪರ್ಕ ಕಲ್ಪಿಸುವಂಥ ರಸ್ತೆ ಸುರಂಗದ ಲೋಕಾರ್ಪಣೆ ಸೇರಿದಂತೆ ಒಟ್ಟಾರೆ 20 ಸಾವಿರ ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ, ಉದ್ಘಾಟನೆಯನ್ನು ಮೋದಿ ನೆರವೇರಿಸುವರು

Advertisement

Udayavani is now on Telegram. Click here to join our channel and stay updated with the latest news.

Next