Advertisement

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

09:39 PM Mar 25, 2024 | Team Udayavani |

ಮಂಡ್ಯ: ತಾಲೂಕಿನ ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ಮದ್ದು ತುಂಬುವ ವೇಳೆ ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

Advertisement

ತಮಿಳುನಾಡು ಮೂಲದ ರಮೇಶ್‌ (67) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡ ನಾಗಲಿಂಗ ಹಾಗೂ ಮತ್ತೊಬ್ಬ ಕಾರ್ಮಿಕರನ್ನು ಮಂಡ್ಯದ ಮಿಮ್ಸ್‌ಗೆ ದಾಖಲಿಸಲಾಗಿದೆ.

ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಹಬ್ಬದ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದವರಿಗೆ ನೀಡಲಾಗಿತ್ತು. ಅದರಂತೆ ನಾಲ್ವರು 15 ದಿನಗಳ ಹಿಂದೆ ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯವಿದ್ದರು. ರವಿವಾರ ರಾತ್ರಿ ಹಬ್ಬ ಮುಗಿದಿತ್ತು. ಆದರೆ ಸೋಮವಾರ ಬೆಳಗ್ಗೆ ಮತ್ತೂಂದು ಗ್ರಾಮದ ಹಬ್ಬಕ್ಕಾಗಿ ಪಟಾಕಿಗೆ ಮದ್ದು ತುಂಬುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಆಲೆಮನೆಯ ಹಂಚುಗಳು ಹಾರಿ ಹೋಗಿವೆ.

 

Advertisement

Udayavani is now on Telegram. Click here to join our channel and stay updated with the latest news.

Next