Advertisement

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

07:47 PM May 21, 2024 | Team Udayavani |

ಬೀದರ್: ರಾಜ್ಯದಲ್ಲಿ ಕಾನೂನು ‌ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ. ರಾಜ್ಯದಲ್ಲಿ ಡ್ರಗ್ಸ್ ಮಾರಾಟ ಜೋರಾಗಿದೆ. ಸಮಾಜಘಾತುಕ ಶಕ್ತಿಗಳು ತಲೆ ಎತ್ತಿವೆ. ಸಮಾಜ ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಕೇಂದ್ರಗಳಾಗಬಾರದು ಎಂದು ಹೈಕೋರ್ಟ್ ಜಡ್ಜ್ ಹೇಳಿದ್ದಾರೆ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಬಂದಿದೆ. ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ. ಗೌರವಸ್ಥರು ರಾತ್ರಿ ಹೊತ್ತು ಓಡಾಡಲು ಆಗುತ್ತಿಲ್ಲ, ಕೊಲೆಗಳಾಗುತ್ತಿವೆ. ಕಾನೂನಿನ ಭಯ ಇಲ್ಲ; ಪೊಲೀಸರ ಭಯಾ ಇಲ್ಲ. ಗೃಹ ಇಲಾಖೆಯ ಪೊಸ್ಟಿಂಗ್ ನಲ್ಲಾದ ಭ್ರಷ್ಟಾಚಾರವೇ ಇದಕ್ಕೆಲ್ಲಾ ಕಾರಣ ಎಂದರು.

ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ್ ಪಾಟೀಲ್ ಪರ ಪ್ರಚಾರ ಮಾಡುತ್ತಿದ್ದೇನೆ. ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಜನಮನ ಗೆದ್ದಿದ್ದಾರೆ. ನಾನೂ ಎಲ್ಲ ಕಡೆ ರಿಪೋರ್ಟ್ ತೆಗೆದುಕೊಂಡಿದ್ದೇನೆ. ಅವರ ಗೆಲುವು ನಿಶ್ಚಿತ, ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next