Advertisement

ಅವಧಿ ವಿಸ್ತರಣೆ ಅಸಾಧ್ಯ: ಎಸ್‌ಟಿಎಸ್‌

11:17 PM Mar 17, 2020 | Lakshmi GovindaRaj |

ವಿಧಾನ ಪರಿಷತ್‌: ರೈತರು ಸಹಕಾರಿ ಸಂಸ್ಥೆಗಳ ಮೂಲಕ ಕೃಷಿ ಮತ್ತು ಕೃಷಿಗೆ ಪೂರಕವಾಗಿ ಮಾಡಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಅಸಲನ್ನು ಮಾ.31ರೊಳಗೆ ತುಂಬಿದರೆ ಬಡ್ಡಿ ಸಂಪೂರ್ಣ ಮನ್ನಾ ಮಾಡಲಾಗುತ್ತದೆ.

Advertisement

ಈ ಅವಧಿಯನ್ನು ವಿಸ್ತರಣೆ ಮಾಡಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು. ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿ, 466 ಕೋಟಿ ಸಾಲದ ಬಡ್ಡಿ ಮನ್ನಾಗೆ ಸರ್ಕಾರ ಒಪ್ಪಿದೆ. ಈಗಾಗಲೇ ರೈತರು 60 ಕೋಟಿ ಅಸಲನ್ನು ಪಾವತಿಸಿದ್ದಾರೆ.

ಈ ಸಂದರ್ಭದಲ್ಲಿ ಅಸಲು ತುಂಬಲು ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ. ಇದಕ್ಕೆ ಹಣಕಾಸು ಇಲಾಖೆಯ ಒಪ್ಪಿಗೆಯೂ ಬೇಕಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next