Advertisement

ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

06:46 PM Nov 15, 2022 | Team Udayavani |

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.

Advertisement

ಈ ಮೊದಲು ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೇ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next