Advertisement

ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

10:56 PM Aug 31, 2019 | Lakshmi GovindaRaj |

ಬೆಂಗಳೂರು: ಪ್ರವಾಹದ ಹಿನ್ನೆಲೆಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿ ಈ ಸಾಲಿನ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಕಾಲಾವಧಿ ವಿಸ್ತರಿಸಿದೆ. ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಈ ಹಿಂದೆ ಸೆ.5 ಕೊನೆಯ ದಿನವಾಗಿತ್ತು.

Advertisement

ಆದರೆ, ಪ್ರವಾಹ ಹಾಗೂ ಇಂಜಿನಿಯರಿಂಗ್‌ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಫ‌ಲಿತಾಂಶ ಇನ್ನೂ ಪ್ರಕಟವಾಗದ ಹಿನ್ನೆಲೆಯಲ್ಲಿ ಸೆ.30ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕಾರ್ಮಿಕ ಕಲ್ಯಾಣ ಮಂಡಳಿ ಆಯುಕ್ತ ಡಾ.ಜಿ.ಮಂಜು ನಾಥ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ www.klwb-kar.com ಅಥವಾ ದೂರವಾಣಿ ಸಂಖ್ಯೆ 080-23570266, ಮೊಬೈಲ್‌ ಸಂಖ್ಯೆ 9731343774 ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next