Advertisement

Udupi Nejar Case ಆರೋಪಿಯ ನ್ಯಾಯಾಂಗ ಬಂಧನ ವಿಸ್ತರಣೆ

11:36 PM Dec 18, 2023 | Team Udayavani |

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗುಲೆಯ ನ್ಯಾಯಾಂಗ ಬಂಧನದ ಅವಧಿಯನ್ನು ಡಿ.30ರ ವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ ಸೋಮವಾರ ಆದೇಶಿಸಿದೆ.

Advertisement

ಡಿ.5ರಂದು ನ್ಯಾಯಾಲಯವು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿ.18ರ ವರೆಗೆ ವಿಸ್ತರಿಸಿತ್ತು. ಆರೋಪಿಯನ್ನು ಸೋಮವಾರ ಪರಪ್ಪನ ಆಗ್ರಹಾರ ಜೈಲಿನಿಂದಲೇ ಪೊಲೀಸರು ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಿದರು.

ನ್ಯಾಯಾಧೀಶೆ ದೀಪಾ ಅವರು ಡಿ.30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಹಿರಿಯ ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಎಚ್‌.ಎಂ. ನದಾಫ್ ಉಪಸ್ಥಿತರಿದ್ದರು.

ಡಿ. 20ರಂದು ಜಾಮೀನು ಅರ್ಜಿ ವಿಚಾರಣೆ
ಆರೋಪಿ ಪರ ವಕೀಲರು ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ಡಿ. 20ರಂದು ನಡೆಯಲಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next