Advertisement

ಶಿವಮೊಗ್ಗದ ಮೂರು ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಸ್ತರಣೆ

08:17 PM Aug 22, 2022 | Team Udayavani |

ಶಿವಮೊಗ್ಗ: ನಗರದ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 26ರ ಬೆಳಗ್ಗೆ ಆರು ಗಂಟೆವರೆಗೆ ನಿಷೇದಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಸೋಮವಾರ ಆದೇಶ ಹೊರಡಿಸಿದ್ದಾರೆ.

Advertisement

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಭಾವಚಿತ್ರ ತೆರವು ಸಂಬಂಧಿಸಿದಂತೆ ಆಗಸ್ಟ್ 15 ರಂದು‌ ನಡೆದಿದ್ದ ಗಲಭೆ ಬಳಿಕ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಡಿಸಿ ಸೆಲ್ವಮಣಿ ನಿಷೇದಾಜ್ಞೆ ಜಾರಿಗೊಳಿಸಿದ್ದರು. ಇದೀಗ ಶಿವಮೊಗ್ಗದಲ್ಲಿ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ನಿಷೇದಾಜ್ಞೆಯಲ್ಲಿ ಸಡಿಲಿಕೆ ಮಾಡಲಾಗಿದ್ದು, ನಗರಾದ್ಯಂತ ವಿಧಿಸಲಾಗಿದ್ದ‌ ನಿಷೇದಾಜ್ಞೆ ಇದೀಗ ಮೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಮಾತ್ರ ಸೀಮಿತವಾಗಿದೆ.

ಹಳೆ ಶಿವಮೊಗ್ಗ ಭಾಗದ ಕೋಟೆ, ದೊಡ್ಡಪೇಟೆ, ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಮುಂದುವರಿಸಲಾಗಿದ್ದು, ಆಗಸ್ಟ್ 26ರಂದು ಬೆಳಗ್ಗೆ ಆರು ಗಂಟೆವರೆಗೆ ಈ ಮೂರು ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next