Advertisement

ಹಣ ಸುಲಿಗೆ ಯತ್ನ : ಆರೋಪಿಗೆ ನಿರೀಕ್ಷಣಾ ಜಾಮೀನು

08:06 PM Mar 29, 2023 | Team Udayavani |

ಕುಂದಾಪುರ: ಕೊಲ್ಲೂರಲ್ಲಿ ಕಳೆದ ಡಿ.19 ರಂದು ಕೆಎಸ್‌ಆರ್‌ಟಿಸಿ ಬಸ್‌ ಚಾಲಕನಿಗೆ ಬೆದರಿಸಿ, ಹಣ ಸುಲಿಗೆಗೆ ಯತ್ನಿಸಿದ ಆರೋಪಿ ಪ್ರಮೋದ ಎಂಬುವರಿಗೆ ಹೈಕೋರ್ಟ್‌ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಶ್ರೀಧರ ದೇವಾಡಿಗ ಎಂಬುವರು ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಆರೋಪಿಯು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಆರೋಪಿ ಪರ ಕುಂದಾಪುರದ ನ್ಯಾಯವಾದಿ ಹಂದಕುಂದ ಅಶೋಕ ಶೆಟ್ಟಿ ಹಾಗೂ ಬೆಂಗಳೂರಿನ ಪ್ರಸನ್ನ ಕುಮಾರ್‌ ಶೆಟ್ಟಿ ವಾದಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next