Advertisement

ಚಾಕು ತೋರಿಸಿ ಹಣ ಸುಲಿಗೆ: ಮಂಗಳಮುಖಿಯರ ವಿರುದ್ಧ ದೂರು

10:55 PM Aug 02, 2023 | Team Udayavani |

ಮಂಗಳೂರು: ಕಾರು ನಿಲ್ಲಿಸಿ ಚಾಕು ತೋರಿಸಿ ಹಣ ಸುಲಿಗೆ ಮಾಡಿರುವ ಬಗ್ಗೆ ಮಂಗಳಮುಖಿಯರ ವಿರುದ್ಧ ನಗರದ ಉರ್ವ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ವ್ಯಕ್ತಿಯೋರ್ವರು ಜು. 9ರಂದು ಕಾರಿನಲ್ಲಿ ಹೋಗುತ್ತಿದ್ದಾಗ ರಾತ್ರಿ 11.30ರ ವೇಳೆಗೆ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಜಂಕ್ಷನ್‌ನಿಂದ ಸ್ವಲ್ಪ ಮುಂದೆ ಮಂಗಳಮುಖಿ ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದು ಅದರಂತೆ ವ್ಯಕ್ತಿ ಕಾರನ್ನು ನಿಲ್ಲಿಸಿ ಮಂಗಳಮುಖಿಯರ ಬಳಿ ಹೋದಾಗ ಪೊದೆಯಲ್ಲಿ ಅವಿತು ಕುಳಿತಿದ್ದ ಇತರ ಮೂವರು ಮಂಗಳಮುಖಿಯರು ಚಾಕು ತೋರಿಸಿ ಬೆದರಿಸಿ ಕಿಸೆಯಲ್ಲಿದ್ದ ಸುಮಾರು 4,500 ರೂ. ನಗದು ಹಾಗೂ ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿದ್ದ ವ್ಯವಹಾರದ ಸುಮಾರು 1.75 ಲಕ್ಷ ರೂ. ನಗದನ್ನು ಸುಲಿಗೆ ಮಾಡಿದ್ದಾರೆ. ಸುಲಿಗೆ ಮಾಡಿದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಮಾನಹಾನಿ ಮಾಡುವುದಾಗಿ ಬೆದರಿಸಿ ಸಮೀಪದಲ್ಲಿ ನಿಲ್ಲಿಸಿದ ಬಿಳಿ ಬಣ್ಣದ ಕಾರಿನಲ್ಲಿ ಕೊಟ್ಟಾರ ಕಡೆಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next