Advertisement

ಯಲಹಂಕ ವಾಯುನೆಲೆಯಲ್ಲಿ ಹೆಚ್ಚುವರಿ ಅಗ್ನಿಶಾಮಕ ಸಿಬ್ಬಂದಿ

04:28 AM Feb 24, 2019 | Team Udayavani |

ಬೆಂಗಳೂರು: ನಗರದ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋ ನ ಪಾರ್ಕಿಂಗ್ ಸ್ಥಳದಲ್ಲಿ ಶನಿವಾರ ಬೆಂಕಿ ಅನಾಹುತ ಸಂಭವಿಸಿ 277 ವಾಹನಗಳು ಸುಟ್ಟು ಕರಕಾಲದ ಘಟನೆ ನಡೆದ ಬಳಿಕ ಅಗ್ನಿಶಾಮಕ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದು, ರವಿವಾರ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 

Advertisement

ಏರ್ ಶೋನ ಕೊನೆಯ ದಿನವಾದ ರವಿವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಡಿಜಿಪಿ ಎಂ.ಎನ್.ರೆಡ್ಡಿ, ಶನಿವಾರ ನಡೆದ ಘಟನೆಯ ತನಿಖೆಯನ್ನು ಮುಂದುವರಿಸಿದ್ದೇವೆ, ರವಿವಾರಕ್ಕೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿದ್ದೇವೆ. ನೂರಕ್ಕೂ ಹೆಚ್ಚು ಮಂದಿ ಅಗ್ನಿಶಾಮಕ ಸಿಬ್ಬಂದಿ ಇಂದು ಯಲಹಂಕ ವಾಯುನೆಲೆಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ ಎಂದರು. 

ಏರ್ ಶೋ ಆರಂಭಕ್ಕೆ ಮುನ್ನಾದಿನ ಅಭ್ಯಾಸ ನಡೆಸುತ್ತಿದ್ದ ಸೂರ್ಯಕಿರಣ್ ವಿಮಾನಗಳೆರಡು ಡಿಕ್ಕಿಯಾದ ಕಾರಣ ಪೈಲಟ್ ಒಬ್ಬರು ಮೃತರಾಗಿದ್ದರು. ಶನಿವಾರ ಶೋ ನಡೆಯುತ್ತಿರುವ ಯಲಹಂಕ ವಾಯುನೆಲೆಯ ಗೇಟ್ ನಂ 5ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 277 ವಾಹನಗಳು ಸುಟ್ಟು ಕರಕಾಲಾಗಿದ್ದವು. 

Advertisement

Udayavani is now on Telegram. Click here to join our channel and stay updated with the latest news.

Next