Advertisement

ಜವಳಿ ಕ್ಷೇತ್ರದಲ್ಲಿದೆ ವಿಫುಲ ಅವಕಾಶ

12:09 PM Feb 24, 2019 | |

ಶಿವಮೊಗ್ಗ: ಜಿಲ್ಲೆಯಲ್ಲಿ ಜವಳಿ ಕ್ಷೇತ್ರದಲ್ಲಿ 1285 ಕೋಟಿ ರೂ.ಗಳ ಬಂಡವಾಳ ಹೂಡಲಾಗಿದ್ದು, ಸುಮಾರು 10,000ಕ್ಕೂ ಹೆಚ್ಚಿನ ಜನರಿಗೆ ಅದರಲ್ಲೂ ವಿಶೇಷವಾಗಿ ಶೇ.90ರಷ್ಟು ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗಾವಕಾಶ ದೊರೆತಿರುವುದು ಸಂತಸದ ಸಂಗತಿ ಎಂದು ಜಿಪಂ ಉಪಾಧ್ಯಕ್ಷೆ ವೇದಾ ವಿಜಯಕುಮಾರ್‌ ಹೇಳಿದರು.

Advertisement

 ಶನಿವಾರ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ನೂತನ ಜವಳಿ ನೀತಿಯಡಿ 2ದಿನಗಳ ಕಾಲ ಮಹಿಳಾ ಉದ್ಯಮಿಗಳಿಗಾಗಿ ಏರ್ಪಡಿಸಿದ್ದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜವಳಿ ಉದ್ಯಮದ
ಬೆಳವಣಿಗೆಗೆ ವಿಫುಲ ಅವಕಾಶಗಳಿದ್ದು, ಆಸಕ್ತರು ಈ ಕಾರ್ಯಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಸುಸಂದರ್ಭ ಇದಾಗಿದೆ. ಈ ಜವಳಿ ಉದ್ಯಮ ಅನೇಕ ಸವಾಲುಗಳ ನಡುವೆಯು ಲಾಭದಾಯಕವಾಗಿ ಮುನ್ನಡೆದಿದೆ. 

ಇದರೊಂದಿಗೆ ಇಲ್ಲಿ ಕಾರ್ಯ ನಿರ್ವಹಿಸುವ ಮಹಿಳೆ ಕಾರ್ಮಿಕರಿಗೆ ಆರೋಗ್ಯ ಸಮಸ್ಯೆಯೂ ಬಾಸುತ್ತಿದೆ. ಅದರಿಂದ ಮುಕ್ತರಾಗಲು ಪೂರಕ ವಾತಾವರಣ ಕಲ್ಪಿಸಬೇಕು ಎಂದರು.

 ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಅಶೋಕ ಈ.ಈ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಷಾಹಿ ಜವುಳಿ ಉದ್ಯಮ ಸಂಸ್ಥೆಯು ಈಗಾಗಲೇ ಸಾಗರ ತಾಲೂಕಿನಲ್ಲಿ ಗಾರ್ಮೆಂಟ್‌ ಆರಂಭಿಸಿದ್ದು, ಸುಮಾರು 2,000 ಮಹಿಳೆಯರಿಗೆ ಉದ್ಯೋಗ ಒದಗಿಸಿದೆ. 

ಜಿಲ್ಲೆಯ ಶಿಕಾರಿಪುರ ಸಮೀಪದಲ್ಲಿ 11ಎಕರೆ ಭೂಮಿಯನ್ನು ಗುರುತಿಸಿದ್ದು, ಶೀಘ್ರದಲ್ಲಿ ಘಟಕ ಆರಂಭಗೊಳ್ಳುವ ನಿರೀಕ್ಷೆ ಇದೆ. ಇಲ್ಲಿ ಸುಮಾರು 3,000 ಮಂದಿಗೆ ಉದ್ಯೋಗಾವಕಾಶ ದೊರೆಯುವ ಸಾಧ್ಯತೆ ಇದೆ ಎಂದರು. ಅಲ್ಲದೆ ಜವಳಿ ಉದ್ಯಮದಲ್ಲಿ ತೊಡಗಿಸಿಕೊಳ್ಳಲಿಚ್ಛಿಸುವ ಇಲಾಖೆ ವತಿಯಿಂದ ಅಗತ್ಯ ನೆರವು ಹಾಗೂ ಸಹಕಾರ ನೀಡಲಾಗುವುದು. ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳು
ರೂ.25 ಲಕ್ಷದಿಂದ 5.00 ಕೋಟಿ ರೂ. ಗಳವರೆಗೆ ಬಂಡವಾಳ ತೊಡಗಿಸುವ ಉದ್ಯಮಿಗಳಿಗೆ ಶೇ.90ರಷ್ಟು ಸಹಾಯಧನ ನೀಡಲಾಗುವುದು ಎಂದರು. 

Advertisement

 ತರಬೇತಿಯಲ್ಲಿ ಜವಳಿ ಉದ್ಯಮ ಕ್ಷೇತ್ರದಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳು, ತರಬೇತಿ, ಯೋಜನೆಗಳ ಮಾಹಿತಿ ನೀಡಲಾಗುತ್ತಿದೆ ಎಂದರು.

ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಅಸಂಖ್ಯಾತ ಮಹಿಳೆಯರು ಇದ್ದರು. ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಯೋಜನೆಗಳ ಮಾಹಿತಿ ನೀಡಿದರು.  ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ವ್ಯವಸ್ಥಾಪಕ ಸೋಲೋಮನ್‌ ಮೆನೇಜಸ್‌, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಶಿವಪ್ರಸಾದ್‌, ಜಿಲ್ಲಾ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಎಂ.ಎ. ರಮೇಶ್‌ ಹೆಗ್ಡೆ, ರಾಜ್ಯ ಹಣಕಾಸು ಸಂಸ್ಥೆಯ ಅಧಿಕಾರಿ ಲಿಂಗಪ್ಪ, ಎಸ್‌. ವಿಶ್ವೇಶ್ವರಯ್ಯ, ಕಾಸಿಯಾ ಜವುಳಿ ಫ್ಯಾನಲ್‌ ಚೇರನ್‌ ಜಯೇಶ್‌ ಭಟಾವಿಯ, ಗ್ರಾಮೀಣ ಜಂಟಿ ಕಾರ್ಯದರ್ಶಿ
ಎಸ್‌. ವಿಶ್ವೇಶ್ವರಯ್ಯ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next