ಉನ್ನಾವ್(ಉತ್ತರ ಪ್ರದೇಶ): ಬರೋಬ್ಬರಿ 32 ರೋಗಿಗಳ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಟಾರ್ಚ್ ಬೆಳಕಿನಲ್ಲಿ ನಡೆಸಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಉನ್ನಾವ್ನಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಮುಖ್ಯ ವೈದ್ಯಕೀಯ ಅಧಿಕಾರಿಯನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ವಿದ್ಯುತ್ ಪೂರೈಕೆ ಸಮರ್ಪಕವಾಗಿ ಇರದಿದ್ದ ಕಾರಣ ಟಾರ್ಚ್ ಬೆಳಕಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎನ್ನಲಾಗಿದೆ. ಈ ಘಟನೆ ಕುರಿತು ಗಂಭೀರವಾದ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ವೈದ್ಯಕೀಯ ಅಧಿಕಾರಿಯನ್ನು ಅಮಾನತುಗೊಳಿಸಿದ್ದು, ನವಾಬ್ಗಂಜ್ನ ಸಮುದಾಯ ಆರೋಗ್ಯ ಕೇಂದ್ರದ ಉಸ್ತುವಾರಿಯನ್ನೂ ವಜಾ ಮಾಡಿದೆ. ಜಿಲ್ಲಾಧಿಕಾರಿಯು ಈ ಪ್ರಕರಣ ಕುರಿತು ತನಿಖೆಗೆ ಆದೇಶಿಸಿದ್ದಾರೆ.
Advertisement
ಟಾರ್ಚ್ ಬೆಳಕಿನಲ್ಲಿ 32 ಜನರಿಗೆ ಕಣ್ಣು ಪೊರೆ
12:12 AM Dec 27, 2017 | Harsha Rao |
Advertisement
Udayavani is now on Telegram. Click here to join our channel and stay updated with the latest news.