Advertisement
ನಾವು ಎಲ್ಲಾ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ನಾವು ಗ್ರಾಮ ಸಂಪರ್ಕ ಅಭಿಯಾನದ ಮೂಲಕ ರಾಜ್ಯದ 170 ಕ್ಷೇತ್ರಗಳಲ್ಲಿ ನಮ್ಮ ಪ್ರಚಾರವನ್ನು ಪ್ರಾರಂಭಿಸಿದ್ದೇವೆ ಮತ್ತು ಈ 170 ಕ್ಷೇತ್ರಗಳಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ನೇಮಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ರೆಡ್ಡಿ ಹೇಳಿದರು.
ರಾಜ್ಯದ ಎಲ್ಲಾ ಮೂರು ಪ್ರಮುಖ ರಾಜಕೀಯ ಪಕ್ಷಗಳು ಭ್ರಷ್ಟಾಚಾರವನ್ನು ತಡೆಗಟ್ಟುವಲ್ಲಿ ಮತ್ತು ಜನರ ನಿರೀಕ್ಷೆಯನ್ನು ಪೂರೈಸುವಲ್ಲಿ ವಿಫಲವಾಗಿವೆ ಎಂದರು.
Related Articles
Advertisement
ಕರ್ನಾಟಕದಲ್ಲಿ ಗೆಲ್ಲುವ ಸಾಧ್ಯತೆಗಳ ಕುರಿತು ಮಾತನಾಡಿದ ಎಎಪಿ ನಾಯಕ, ಪಕ್ಷವು ಗೆಲ್ಲಲು ಹೋರಾಟ ನಡೆಸುತ್ತಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ಅದು ತನ್ನ ಅಸ್ತಿತ್ವವನ್ನು ಕಂಡುಕೊಳ್ಳುವ ಭರವಸೆಯಿದೆ ಎಂದರು.
ಆಪ್ ಈಗಾಗಲೇ ಅರ್ಧಕ್ಕಿಂತ ಹೆಚ್ಚು ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಹಂತದಲ್ಲಿದೆ ಮತ್ತು ಚುನಾವಣೆಗೆ ಕೇವಲ ನಾಲ್ಕು ತಿಂಗಳ ಮೊದಲು 2023 ರ ಜನವರಿ ಮೊದಲ ವಾರದೊಳಗೆ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಉದ್ದೇಶಿಸಿದ್ದು, ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ಹೇಳಲಾಗಿದೆ.