Advertisement

ನಿರೀಕ್ಷೆ ಹುಸಿ, ಕರಾವಳಿಗರಿಗೆ ನಿರಾಸೆ

12:05 AM May 31, 2019 | Team Udayavani |

ಮಂಗಳೂರು: ಮೋದಿ ನೇತೃತ್ವದ ನೂತನ ಕೇಂದ್ರ ಸರಕಾರದಲ್ಲಿ ದಕ್ಷಿಣ ಕನ್ನಡ ಅಥವಾ ಉಡುಪಿ ಸೇರಿ ಕರಾವಳಿ ಭಾಗಕ್ಕೆ ಪ್ರಾತಿನಿಧ್ಯ ದೊರೆಯಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದ್ದು, ಅಭಿಮಾನಿಗಳಲ್ಲಿ ಕೊಂಚ ನಿರಾಸೆ ಮೂಡಿಸಿದೆ.

Advertisement

ಕಳೆದ ಕೇಂದ್ರ ಸಂಪುಟದಲ್ಲಿ ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಸಚಿವರಾಗಿದ್ದರು. ಈ ಬಾರಿ ಸ್ಥಾನ ಪಡೆಯುವಲ್ಲಿ ಅವರು ವಿಫಲರಾಗಿದ್ದಾರೆ. ದಕ್ಷಿಣ ಕನ್ನಡದಿಂದ ನಿರಂತರ ಮೂರನೇ ಬಾರಿಗೆ ಆಯ್ಕೆಯಾಗಿರುವ ನಳಿನ್‌ ಮತ್ತು ಉಡುಪಿ-ಚಿಕ್ಕಮಗಳೂರಿಂದ ಎರಡನೇ ಬಾರಿಗೆ ಆಯ್ಕೆಯಾಗಿರುವ ಶೋಭಾ ಪೈಕಿ ಒಬ್ಬರಿಗೆ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇತ್ತು. ನಳಿನ್‌ ಮತ್ತು ಶೋಭಾ, ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರೀಯ ಪ್ರಭಾವಿ ವಲಯದಲ್ಲಿ ಗುರುತಿಸಿಕೊಂಡಿರುವುದು ಇದಕ್ಕೆ ಪುಷ್ಠಿ ನೀಡಿತ್ತು.

ಈ ಮಧ್ಯೆ, ಬೆಂಗಳೂರು ಉತ್ತರ ಸಂಸದ, ಸುಳ್ಯದ ದೇವರಗುಂಡ ಸದಾನಂದ ಗೌಡ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಏಕಕಾಲದಲ್ಲಿ ಬೆಂಗಳೂರು ಮತ್ತು ಕರಾವಳಿಗೆ ಪ್ರಾತಿನಿಧ್ಯ ನೀಡಿದಂತಾಗಿದೆ ಎಂಬ ವಿಶ್ಲೇಷಣೆಯೂ ನಡೆದಿದೆ.

ವಿಎಚ್‌ಪಿ, ಬಜರಂಗ ದಳದಿಂದ ರಕ್ತದಾನ: ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಸುಳ್ಯ ಕೆವಿಜಿ ಮೆಡಿಕಲ್‌ ಕಾಲೇಜಿನಲ್ಲಿ ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ ಸುಳ್ಯ ಪ್ರಖಂಡದ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next