Advertisement

ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ ನೀಡಿ

05:48 PM Feb 13, 2022 | Team Udayavani |

ಭಾಲ್ಕಿ: ಬೀದಿಬದಿ ವ್ಯಾಪಾರಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳು ದೊರೆಯಬೇಕು ಎಂದು ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘಟನೆ ರಾಜ್ಯಾಧ್ಯಕ್ಷ ಸಿ.ಇ. ರಂಗಸ್ವಾಮಿ ಹೇಳಿದರು.

Advertisement

ಪಟ್ಟಣದ ಪುರಭವನದಲ್ಲಿ ಶನಿವಾರ ನಡೆದ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮುಂದೆಯೂ ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ಸಿಗುವ ಎಲ್ಲ ರೀತಿಯ ಸೌಲಭ್ಯಗಳು ದೊರೆಯುಂತಾಗಬೇಕು. ಈ ನಿಟ್ಟಿನಲ್ಲಿ ಸಂಘಟನೆ ವತಿಯಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಬೀದಿಬದಿ ವ್ಯಾಪಾರಿಗಳ ಸಂಘಟನೆ ಜಿಲ್ಲಾಧ್ಯಕ್ಷ ದಿಲೀಪ ಜೋಳದಪಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೀದಿಬದಿ ವ್ಯಾಪಾರಿಗಳ ಸಂಘಟನೆ ರಾಜ್ಯ ಉಸ್ತುವಾರಿ ಶಾಲಿವಾನ ರಂಗಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಬೆಂಗಳೂರಿನ ಪದಾಧಿಕಾರಿಗಳಾದ ದೊಡ್ಡನ್‌ ಬಿಕೆ, ಇಸ್ಲಾಂ, ಮಹ್ಮದ್‌ ರಿತೀಕ್‌, ಪುರಸಭೆ ಮುಖ್ಯಾಧಿಕಾರಿ ಡಾ| ಶಿವರಾಜ ರಾಠೊಡ, ಎಂ.ಡಿ. ಮೆಹತಾಬ ಇದ್ದರು. ಪುರಸಭೆ ಅಧಿಕಾರಿ ಸ್ವಾಮಿದಾಸ ಸ್ವಾಗತಿಸಿದರು. ದೀಪಕ ಥಮಕೆ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next