Advertisement

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

11:47 PM May 01, 2024 | Team Udayavani |

ಬೆಂಗಳೂರು: ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ, ಕಾಂಗ್ರೆಸ್‌ನವರೇ ಜೋಡೆತ್ತಿನ ರೀತಿಯಲ್ಲಿ ಜತೆಗೆ ನಿಂತು ಅವರನ್ನು ಗೆಲ್ಲಿಸಿಕೊಂಡಿದ್ದು, ಪ್ರಜ್ವಲ್‌ ವಿದೇಶಕ್ಕೆ ಪ್ರಯಾಣ ಬೆಳೆಸುವುದಕ್ಕೆ ರಾಜ್ಯ ಸರಕಾರದ ಪೊಲೀಸ್‌ ವೈಫ‌ಲ್ಯವೇ ಕಾರಣ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಗೆಲ್ಲಿಸುವುದಕ್ಕೆ ಕಾಂಗ್ರೆಸ್‌ ಸಹಕರಿಸಿರಲಿಲ್ಲವೇ? ಜೋಡೆತ್ತಿನ ರೀತಿ ನೀವೇ ಹೋರಾಟ ಮಾಡಿ ಗೆಲ್ಲಿಸಿದ್ದೀರಿ, ನಿಮ್ಮ ಮೈತ್ರಿ ಸಂದರ್ಭದಲ್ಲಿ ಗೆದ್ದಿರಲಿಲ್ಲವೇ ಎಂಬುದಕ್ಕೆ ಕಾಂಗ್ರೆಸ್‌ ನಾಯಕರು ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿÇÉಾಧಿಕಾರಿ ಏನು ಮಾಡುತ್ತಿದ್ದರು? ಗುಪ್ತಚರ ದಳ ವಿಫ‌ಲವಾಗಿದೆ ಎಂಬುದನ್ನು ರಾಜ್ಯ ಸರಕಾರ ಒಪ್ಪಿಕೊಳ್ಳಲಿ ಎಂದು ಆಗ್ರಹಿಸಿದರು.

ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇಲ್ಲವಾದರೆ ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಇಲ್ಲ ಎಂದು ಕಾಂಗ್ರೆಸ್‌ ಸರಕಾರ ಒಪ್ಪಿಕೊಳ್ಳಲಿ. ನಿಮ್ಮ ವೈಫ‌ಲ್ಯ ಮುಚ್ಚಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯನ್ನು ಏಕೆ ಪ್ರಶ್ನೆ ಮಾಡುತ್ತೀರಿ? ಎಂದು ಆರ್‌. ಅಶೋಕ್‌ ಪ್ರಶ್ನಿಸಿದರು. ಕಾನೂನು-ಸುವ್ಯವಸ್ಥೆ ಕಾಪಾಡುವುದು ರಾಜ್ಯದ ಜವಾಬ್ದಾರಿ. ಇದರಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next