Advertisement

ನವಲಕಲ್ಲು ಬೃಹನ್ಮಠದಲ್ಲಿ ರಥೋತ್ಸವ ಸಂಭ್ರಮ

07:48 PM Mar 22, 2021 | Team Udayavani |

ಸಿರವಾರ: ಸಮೀಪದ ನವಲಕಲ್ಲು ಬೃಹನ್ಮಠದಲ್ಲಿ ಲಿಂ| ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ 24ನೇ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಸಾಯಂಕಾಲ ವಿಜೃಂಭಣೆಯಿಂದ ರಥೋತ್ಸವ ಜರುಗಿತು.

Advertisement

ಬೆಳಗ್ಗೆ ಸೋಮಶೇಖರ ಶಿವಾಚಾರ್ಯ ಸ್ವಾಮಿಗಳ ಗದ್ದುಗೆಗೆ ರುದ್ರಾಭಿಷೇಕ, ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಸಂಜೆ ಮಠದ ಪೀಠಾಧಿ ಪತಿ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಸಾವಿರಾರು ಭಕ್ತರ ಮಧ್ಯೆ ರಥೋತ್ಸವ ಜರುಗಿತು.

ಯರಡೋಣಿಯ ಮುರು ಘೇಂದ್ರಸ್ವಾಮೀಜಿ, ಸಿಂಧನೂರಿನ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ನೀಲಗಲ್‌ ಬೃಹನ್ಮಠದ ಬಾಲಯೋಗಿ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ವೀರಘೋಟ ಅಡವಿಲಿಂಗ ಮಹಾರಾಜರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next