Advertisement

ಅತಂತ್ರ ವಿಧಾನಸಭೆ ಸಮೀಕ್ಷೆ ಸುಳ್ಳು: ಬಿಎಸ್‌ವೈ

06:30 AM May 04, 2018 | |

ಶಿವಮೊಗ್ಗ: ಸಿದ್ದರಾಮಯ್ಯ ಸಿಎಂ ಆಗಿರುವುದು ಇನ್ನು ನಾಲ್ಕೈದು ದಿನವಷ್ಟೆ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದಟಛಿ ಅದೇನು ಟ್ವೀಟ್‌ ಮಾಡುತ್ತಾರೋ ಮಾಡಿಕೊಳ್ಳಲಿ ಎಂದು ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುಟುಕಿದರು.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅತಂತ್ರ ವಿಧಾನಸಬೆ ಎಂಬ ಸಮೀಕ್ಷೆಗಳ ವರದಿ ಸುಳ್ಳಾಗಲಿದೆ. ಉತ್ತರ ಪ್ರದೇಶದಲ್ಲಿ ಸಮೀಕ್ಷೆಗಳನ್ನು ಸುಳ್ಳಾಗಿಸಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳೊಂದಿಗೆ ಬಹುಮತಗಳಿಸಿ ಅಧಿಕಾರಕ್ಕೆ ಬಂದಿತ್ತು. ಇಲ್ಲಿಯೂ ಅದೇ ರೀತಿಯ ಫಲಿತಾಂಶ ಬರಲಿದೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಮೇ 4 ರಂದು ಬಿಡುಗಡೆ ಮಾಡಲಿದ್ದು, ಶೇ.5 ರಷ್ಟು ಮತ ಗಳಿಕೆ ಪ್ರಮಾಣ ಹೆಚ್ಚಾಗಲಿದೆ. ಜನ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ತಮಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next