Advertisement

Fake message ಸಿಜೆಐ ಡಿ.ವೈ.ಚಂದ್ರಚೂಡ್‌ ಹೆಸರಲ್ಲಿ ನಕಲಿ ಮೆಸೇಜ್‌

12:11 AM Aug 15, 2023 | Team Udayavani |

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ಹೆಸರಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Advertisement

ಇದರಲ್ಲಿ ಸಿಜೆಐ ಅವರ ಫೋಟೋ ಕೂಡ ಇದೆ. “ಜನರು ಬೀದಿಗಿಳಿದು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಬೇಕು’ ಎಂಬುದು ಸಂದೇಶದ ಸಾರಾಂಶವಾಗಿದೆ. ಇದು ಇಂಗ್ಲಿಷ್‌ ಮತ್ತು ಹಿಂದಿ ಭಾಷೆಗಳಲ್ಲಿ ವಾಟ್ಸ್‌ ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌ನ ಕಾರ್ಯದರ್ಶಿ ಅತುಲ್‌ ಕುಹೇìಕರ್‌ “ಇದೊಂದು ನಕಲಿ ಸಂದೇಶ.

ಸಿಜೆಐ ಈ ರೀತಿ ಯಾವುದೇ ಹೇಳಿಕೆ ನೀಡಿಲ್ಲ’ ಎಂದು ಸ್ಟಷ್ಟಪಡಿಸಿದ್ದಾರೆ. “ಸಿಜೆಐಯಾದವರು ಈ ರೀತಿ ಸರಕಾರದ ವಿರುದ್ಧ ಯಾವುದೇ ಕಾರಣಕ್ಕೂ ಹೇಳಿಕೆಗಳನ್ನು ನೀಡುವುದಿಲ್ಲ. ನಕಲಿ ಸಂದೇಶ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಜನರು ಇದನ್ನು ನಂಬ ಬಾರದು’ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next