Advertisement

ಜನರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್, ನಕಲಿ ಆರೋಗ್ಯ ಇಲಾಖೆ ಸಿಬ್ಬಂದಿ

10:01 AM Apr 22, 2020 | keerthan |

ಶಿವಮೊಗ್ಗ: ಲಾಕ್ ಡೌನ್ ಹಿನ್ನೆಲೆಯಲ್ಲಿ ಜನರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಹಾಗೂ ನಕಲಿ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಬಂಧಿಸಲಾಗಿದೆ.

Advertisement

ಶಿವಮೊಗ್ಗ ತಾಲೂಕಿನ ಗ್ರಾಮೀಣ ಭಾಗದಲ್ಲಿ ಮಾಸ್ಕ್ ಧರಿಸದೆ ಬೈಕ್‌ ನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಮಾಸ್ಕ್ ಧರಿಸಿಲ್ಲ ನಿಮ್ಮ ಮೇಲೆ ಕೇಸ್ ದಾಖಲಿಸುತ್ತೇವೆ ಎಂದು ಹೆದರಿಸಿ ಈ ಖದೀಮರು ಹಣ ವಸೂಲಿ ಮಾಡುತ್ತಿದ್ದರು.

ಶಿವಮೊಗ್ಗ ಟಿಪ್ಪು ನಗರದ ವಾಸಿಂ ಹಾಗೂ ಅಲಿ ಎಂಬಿಬ್ಬರು ದುಷ್ಕರ್ಮಿಗಳು ಕುಂಸಿ ಠಾಣೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಜನರನ್ನು ಹೆದರಿಸಿ‌ ಹಣ ವಸೂಲಿ ಮಾಡುತ್ತಿದ್ದರು.

ಹಾರನಹಳ್ಳಿ ಗ್ರಾಮದಲ್ಲಿ ಜನರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿರುವಾಗ ಅನುಮಾನಗೊಂಡ ಸ್ಥಳಿಯರು ವಿಚಾರಣೆ ನಡೆಸಿದಾಗ ಇವರು ನಕಲಿ ಎಂಬ ಸತ್ಯ ಬೆಳಕಿಗೆ ಬಂದಿದ್ದು, ಕೂಡಲೇ ಸ್ಥಳೀಯರು ಇಬ್ಬರಿಗೂ ಧರ್ಮದೇಟು ನೀಡಿ ಕುಂಸಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next