Advertisement

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

12:33 AM May 05, 2024 | Team Udayavani |

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ನಕಲಿ ಪೋಸ್ಟ್‌ ಹಾಕಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಪೋಸ್ಟ್‌ಕಾರ್ಡ್‌ ಮುಖ್ಯಸ್ಥ ಮಹೇಶ್‌ ವಿಕ್ರಮ್‌ ಹೆಗ್ಡೆ ಮತ್ತು ವಸಂತ್‌ ಗಿಳಿಯಾರ್‌ ಅವರನ್ನು ಸದ್ಯ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

Advertisement

ಪ್ರಕರಣ ಸಂಬಂಧ ನಿರೀಕ್ಷಣ ಜಾಮೀನು ಕೋರಿ ಮಹೇಶ್‌ ವಿಕ್ರಮ್‌ ಹೆಗ್ಡೆ ಮತ್ತು ವಸಂತ್‌ ಗಿಳಿಯಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

ಅರ್ಜಿಯ ವಿಚಾರಣೆ ವೇಳೆ ಪೊಲೀಸರ ಪರ ಹೆಚ್ಚುವರಿ ಸರಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮೇ 9ಕ್ಕೆ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next