Advertisement

ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ತಯಾರಿಸುತ್ತಿದ್ದ ತಂಡ ಸಿಸಿಬಿ ಬಲೆಗೆ: 10 ಮಂದಿ ಬಂಧನ

03:29 PM Jan 04, 2021 | Team Udayavani |

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೊನೊಗ್ರಾಮ್ ಬಳಸಿ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಹನದ ಆರ್.ಸಿ. ಕಾರ್ಡ್ ಗಳನ್ನು ತಯಾರಿಸುತ್ತಿದ್ದ ಖದೀಮರ ಗುಂಪೊಂದು ಇಂದು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದೆ.

Advertisement

ನಗರ ಸಿಸಿಬಿ ಪೊಲೀಸರು ಇಂದು ಕಾರ್ಯಾಚರಣೆ ನಡೆಸಿ ಹತ್ತು ಮಂದಿ ವಂಚಕರನ್ನು ಸೆರೆ ಹಿಡಿದಿದ್ದಾರೆ.

ಕಮಲೇಶ್ ಕುಮಾರ್, ಎಸ್.ಲೋಕೇಶ್, ಸುದರ್ಶನ್, ನಿರ್ಮಲ್ ಕುಮಾರ್,  ದರ್ಶನ್, ಶ್ರೀಧರ, ಚಂದ್ರಪ್ಪ, ಅಭಿಲಾಶ್, ತೇಜಸ್ ಸೇರಿದಂತೆ ಹತ್ತು ಮಂದಿ ವಂಚಕರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಅರ್ಧ ಪ್ಯಾಂಟ್ ಧರಿಸಿ ಮಾತನಾಡುವುದು ರಾಷ್ಟ್ರೀಯತೆಯಲ್ಲ:RSS ವಿರುದ್ಧ ಪೈಲಟ್ ಪರೋಕ್ಷ ವಾಗ್ಧಳಿ

ಕನಕಪುರ ರಸ್ತೆ ಗುಲ್ಲಾಳ ಗ್ರಾಮದ ಫ್ಲಾಟೊಂದರಲ್ಲಿ ಕಮಲೇಶ್ ಎಂಬಾತ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಹನದ ಆರ್.ಸಿ. ಕಾರ್ಡ್ ಗಳನ್ನು ತಯಾರಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಈತನೊಂದಿಗೆ ಶಾಮೀಲಾಗಿರುವ ಇತರರನ್ನು ಬಂಧಿಸಲಾಗಿದೆ.

Advertisement

ಸ್ಥಳದಲ್ಲಿ ಸಾವಿರಾರು ನಕಲಿ ಕಾರ್ಡುಗಳು, ಲ್ಯಾಪ್ ಟಾಪ್ ಮತ್ತು ಪ್ರಿಂಟರ್ ನ್ನು ವಶಕ್ಕೆ ಪಡೆಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next