Advertisement

ನಕಲಿ ಬಿತ್ತನೆ ಬೀಜ, ಕಳಪೆ ರಸಗೊಬ್ಬರ ಮಾಡಿದರೆ ಗಡಿಪಾರು: ಶೋಭಾ ಕರಂದ್ಲಾಜೆ

09:01 PM Aug 17, 2021 | Team Udayavani |

ಹಾಸನ: ನಕಲಿ ಬಿತ್ತನೆ ಬೀಜ ಮತ್ತು ಕಳಪೆ ರಸಗೊಬ್ಬರ ಮಾಡುವವರನ್ನು ಗುರುತಿಸಿ ಕಪ್ಪು ಪಟ್ಟಿಗೆ ಸೇರಿಸುವುದಲ್ಲದೇ ರಾಜ್ಯದಿಂದಲೇ ಗಡಿಪಾರು ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರ ಶೋಭಾ ಕರಂದ್ಲಾಜೆ ಎಚ್ಚರಿಸಿದರು.

Advertisement

ಜನಾಶೀರ್ವಾದ ಯಾತ್ರೆ ಮೂಲಕ ಹಾಸನಕ್ಕೆ ಆಗಮಿಸಿದ ಅವರು ನಗರದ ಹೊಸ ಕೊಪ್ಪಲು ಬಡಾವಣೆಯ ಎಚ್‌ಎಂಟಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕ್ಷೇತ್ರದಲ್ಲಿ ಅತಿ ಹೆಚ್ಚು ರಪು¤ ಮತ್ತು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದೇವೆ.

ಇದನ್ನೂ ಓದಿ:ತಾಲಿಬಾನ್ ಹಿಡಿತದಲ್ಲಿ ಅಫ್ಘಾನ್  : ಮಹತ್ವದ ಸಭೆ ನಡೆಸಿದ ಮೋದಿ

ರೈತರಿಗೆ ರಸಗೊಬ್ಬರ ಬಳಸುವ ಬಗ್ಗೆ ಮಾಹಿತಿ ಕೊರತೆಯಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಶಿಕ್ಷಣ ನೀಡಲಾಗುವುದು. ಇದು ರೈತರಿಗೆ ಹೆಚ್ಚುಉಪಯುಕ್ತವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next