Advertisement

ಸಿಎಂ ಹೆಸರಿನಲ್ಲಿ ನಕಲಿ ಟ್ವಿಟರ್‌: ಆರೋಪಿ ಸೆರೆ

11:19 AM Jul 01, 2017 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಟ್ವಿಟರ್‌ ಖಾತೆ ತೆರೆದು ಅವಹೇಳನಕಾರಿ ಟ್ವೀಟ್‌ ಮಾಡಿದ್ದ ಪ್ರಕರಣ ಸಂಬಂಧ ಖಾಸಗಿ ಕಂಪನಿಯ ಉದ್ಯೋಗಿಯನ್ನು ಶುಕ್ರ ವಾರ ಸಿಐಡಿ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಮಧುಸೂಧನ್‌ (30)ಬಂಧಿತ ಆರೋಪಿ. 

Advertisement

ಆರೋಪಿ ಮಧುಸೂಧನ್‌ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ ವೇರ್‌ ಎಂಜಿನಿಯರ್‌ ಆಗಿದ್ದು, ಸಿಎಂ ಆಫ್ ಕರ್ನಾಟಕ ಹೆಸರಿನ ಟ್ವಿಟರ್‌ ಖಾತೆ ಸೃಷಿಸಿ, ಸಿದ್ದರಾಮಯ್ಯ ಅವರು ನಿದ್ದೆ ಮಾಡುವುದು ಸೇರಿ ಇನ್ನಿತರ ಅವಹೇಳನಕಾರಿ ಟ್ವೀಟ್‌ ಮಾಡುತ್ತಿದ್ದ ಬಗ್ಗೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿ, ನಕಲಿ ಖಾತೆಯಲ್ಲಿ ಟ್ವೀಟ್‌ ಮಾಡುತ್ತಿದ್ದ.  ಈ ಬಗ್ಗೆ ದೂರು ದಾಖಲಾದ ಬಳಿಕ ಎಚ್ಚೆತ್ತುಕೊಂಡು, ಟ್ವಿಟರ್‌ ಖಾತೆಯನ್ನು ನಾನೇ ಗಡ್ಡಪ್ಪ ಎಂದು ಬದಲಾಯಿಸಿ ಕೆಲ ಸಮಯ ಬಳಕೆ ಮಾಡಿದ್ದ. ಬಳಿಕ, ಅದನ್ನೂ ಸ್ಥಗಿತಗೊಳಿಸಿರುವುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ನಕಲಿ ಟ್ವಿಟರ್‌ ಖಾತೆ ಬಗ್ಗೆ ಡಿಸೆಂಬರ್‌ 29ರಂದು ಸಿಎಂ ಮಾಧ್ಯಮ ಸಲಹೆಗಾರ ದಿನೇಶ್‌ ಅಮಿನ್‌ ಮಟ್ಟು ಅವರು ಸಿಐಡಿ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿತ್ತು.  

Advertisement

Udayavani is now on Telegram. Click here to join our channel and stay updated with the latest news.

Next