Advertisement

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

10:40 AM Apr 20, 2024 | Team Udayavani |

ಹುಬ್ಬಳ್ಳಿ: ನೇಹಾ ಹಿರೇಮಠ ಸಾವು ಖಂಡನೀಯ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಈ ತರಹದ ಕೃತ್ಯಗಳು ಮರುಕಳಿಸದಂತೆ ಕಾಲಕ್ಕೆ ತಕ್ಕಂತೆ ಕಾನೂನು ಬದಲಾವಣೆ ಆದರೆ ಒಳ್ಳೆಯದು ಎಂದು ಶಿರಹಟ್ಟಿಯ ಫಕೀರ ಸಿದ್ಧರಾಮೇಶ್ವರ ಶಿವಯೋಗಿಗಳು ಹೇಳಿದರು.

Advertisement

ಮೃತ ನೇಹಾಳ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ತಕ್ಕಶಿಕ್ಷೆ ಆಗದೇ ಹೋದಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.

ಇದೀಗ ಸಮಾಜದಲ್ಲಿ ಇಂತಹ ಕೃತ್ಯಗಳು ಆಗಾಗ ಹೆಚ್ಚಾಗುತ್ತಿವೆ. ಯುವ ಸಮುದಾಯವನ್ನು ಸರಿಯಾದ ದಾರಿಯಲ್ಲಿ ತರುವ ಕೆಲಸವನ್ನು ಸಮಾಜದ ಧುರೀಣರು, ಮಠಾಧೀಶರು ಮಾಡಬೇಕಿದೆ ಎಂದರು.

ಬೇರೆ ಬೇರೆ ರೋಗ ಬಂದರೆ ಹೇಗೆ ಔಷಧಿ ಬದಲಾವಣೆ ಆಗುವಂತೆ ಬೇರೆ ಬೇರೆ ಸಮಸ್ಯೆಗಳ ಪರಿಹಾರಕ್ಕೆ ಕಾನೂನು ಬದಲಾವಣೆ ಅವಶ್ಯ ಎಂದರು.

ಸಮಾಜದಲ್ಲಿ ದುರಾಸೆ ಹೆಚ್ಚಾಗಿದೆ. ಆಸ್ತಿ, ವೈಯಕ್ತಿಕ ಆಚಾರ, ವಿಚಾರದಿಂದ ಮಕ್ಕಳು ಹಿರಿಯರ ಮಾತು ಕೇಳದ ಕಾರಣಕ್ಕೆ ಈ ತರಹದ ದುರ್ಘಟನೆಗಳು ನಡೆಯುತ್ತಿವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next