Advertisement

CM Siddaramaiah ಮೇಲಿನ ದ್ವೇಷಕ್ಕೆ ಸುಳ್ಳು ಆಪಾದನೆ : ಸಿದ್ದರಾಮಾನಂದ ಪುರಿ ಶ್ರೀ

09:35 PM Aug 11, 2024 | Team Udayavani |

ಮಾನ್ವಿ (ರಾಯಚೂರು ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಯಾವುದೇ ತಪ್ಪಾಗಿಲ್ಲ ಅವರ ಮೇಲೆ ಕೆಲವರಿಗಿರುವ ಅಸಹನೆ ಹಾಗೂ ದ್ವೇಷದ ಕಾರಣದಿಂದ ಅವರ ಮೇಲೆ ಸುಳ್ಳು ಆಪಾದನೆ ಮಾಡಲಾಗುತ್ತಿದೆ ಎಂದು ಕಲಬುರಗಿ ವಿಭಾಗದ ಕಾಗಿನೆಲೆ ಗುರು ಪೀಠದ ಶ್ರೀ ಸಿದ್ದರಾಮಾನಂದ ಪುರಿ ಸ್ವಾಮೀಜಿ ಅಭಿಪ್ರಾಯಪಟ್ಟರು.

Advertisement

ತಾಲೂಕಿನ ನಕ್ಕುಂದಿ ಗ್ರಾಮದಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ನೂತನ ಮೂರ್ತಿ ಅನಾವರಣಗೊಳಿಸುವ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ ಸಿದ್ದರಾಮಯ್ಯ ಅವರು ಎಂದೂ ಕೂಡ ಭ್ರಷ್ಟಾಚಾರ ಮತ್ತು ಜಾತಿವಾದಕ್ಕೆ ತಮ್ಮ ರಾಜಕಾರಣದಲ್ಲಿ ಅವಕಾಶ ನೀಡಿದವರಲ್ಲ. ರಾಜ್ಯಾದ್ಯಂತ ಹಾಗೂ ನಗರ, ಪಟ್ಟಣಗಳಲ್ಲಿ ಪಕ್ಷದ ಕಾರ್ಯಕರ್ತರು ಸಿದ್ದರಾಮಯ್ಯ ಪರವಾಗಿ ಹೋರಾಟ ನಡೆಸುತ್ತಿದ್ದಾರೆ ಸಿದ್ದರಾಮಯ್ಯನವರಿಗೆ ಹಾಲುಮತ ಸಮಾಜ ಒಂದೇ ಅಲ್ಲ ರಾಜ್ಯದಲ್ಲಿನ ಎಲ್ಲಾ ಜಾತಿ, ಸಮುದಾಯಗಳು ಬೆಂಬಲ ವ್ಯಕ್ತಪಡಿಸುತ್ತಿವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಂತ ಒಳ್ಳೆಯ ವ್ಯಕ್ತಿಯ ಮೇಲೆ ಆಪಾದನೆ ಬಂದಿರುವುದು ಬೇಸರ ತಂದಿದೆ ಅವರ ಮೇಲೆ ರಾಜ್ಯಪಾಲರು ಯಾವ ರೀತಿಯ ನಿರ್ಣಯ ಕೈಗೊಳ್ಳುತ್ತಾರೆ ಎನ್ನುವುದು ಕಾದು ನೋಡಬೇಕಾಗಿದೆ. ಅವರು ಕೂಡ ಕಾನೂನು ಹೋರಾಟಕ್ಕೆ ಮುಂದಾಗಿದ್ದು ಆಪಾದನೆಯಿಂದ ಶೀಘ್ರವೇ ಹೊರ ಬರಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next