Advertisement

“ಸಿದ್ದು-ಎಚ್‌ಡಿಕೆ ಆರೋಪ ಜನತೆಗೆ ತಪ್ಪು ಸಂದೇಶ’

10:59 PM Sep 24, 2019 | Lakshmi GovindaRaju |

ಹುಬ್ಬಳ್ಳಿ: ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷಗಳ ನಾಯಕರಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಪರಸ್ಪರ ಆರೋಪಕ್ಕಿಳಿದಿರುವುದು ಜನತೆಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಇದನ್ನು ಇಬ್ಬರೂ ನಾಯಕರು ಅರಿಯಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, 14 ತಿಂಗಳು ಅಧಿಕಾರ ನಡೆಸಿದ ಸಮ್ಮಿಶ್ರ ಸರಕಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಸಿಎಂ ಹಾಗೂ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಸೋಲು, ಸಮ್ಮಿಶ್ರ ಸರಕಾರ ಪತನ ಇದೀಗ ಮುಗಿದ ಅಧ್ಯಾಯ. ಅದೇ ವಿಚಾರವಾಗಿ ಇಬ್ಬರೂ ಪರಸ್ಪರ ಆರೋಪಕ್ಕಿಳಿಯುವುದು ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next