Advertisement

Rajeev Chandrasekhar ಬಗ್ಗೆ ಸುಳ್ಳು ಪ್ರಚಾರ: ಶಶಿ ತರೂರ್‌ ವಿರುದ್ಧ ಕೇಸು ದಾಖಲು

12:25 AM Apr 22, 2024 | Team Udayavani |

ತಿರುವನಂತಪುರಂ: ಪ್ರತಿಸ್ಪರ್ಧಿ ಹಾಗೂ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಬಗ್ಗೆ ಅವಹೇಳನ ಮಾಡಿದ ಆರೋಪದ ಮೇಲೆ ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್‌ ವಿರುದ್ಧ ಕೇರಳ ಸೈಬರ್‌ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಣ ಹಂಚುವ ಮೂಲಕ ಕ್ಷೇತ್ರದ ಮತದಾರರ ಮೇಲೆ ಪ್ರಭಾವ ಬೀರಲು ರಾಜೀವ್‌ ಯತ್ನಿಸುತ್ತಿದ್ದಾರೆ ಎಂದು ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ತರೂರ್‌ ದೂರಿದ್ದರು. ಈ ಬಗ್ಗೆ ಬಿಜೆಪಿಯ ಪದ್ಮಕುಮಾರ್‌ ದೂರು ನೀಡಿದ ಹಿನ್ನೆಲೆಯಲ್ಲಿ ಎ.15ರಂದೇ ಪೊಲೀಸರು ಪ್ರಕರಣ ದಾಖಲಿಸಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next