Advertisement

ಸರ್ಕಾರ ಉಳಿಸಲು ಸುಳ್ಳು ಹೇಳಿಕೆ

06:35 AM Mar 22, 2019 | Team Udayavani |

ಬೆಂಗಳೂರು: “ರಾಜ್ಯ ಸರ್ಕಾರವನ್ನು ಉಳಿಸುವ ಸಲುವಾಗಿ ಬಿಜೆಪಿ ಮುಖಂಡರಿಂದ ಐದು ಕೋಟಿ ರೂ. ಪಡೆದಿದ್ದಾಗಿ ಹೇಳಿಕೆ ನೀಡಿದ್ದೆ’ ಎಂದು ಶಾಸಕ ಶ್ರೀನಿವಾಸಗೌಡ ಎಸಿಬಿ ಅಧಿಕಾರಿಗಳ ಎದುರು ಹೇಳಿಕೆ ದಾಖಲಿಸಿದ್ದಾರೆ.

Advertisement

ಆಪರೇಷನ್‌ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಮುಖಂಡರಿಂದ ಮುಂಗಡವಾಗಿ ಐದು ಕೋಟಿ ರೂ. ಪಡೆದ ಆರೋಪ ಪ್ರಕರಣ ಸಂಬಂಧ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಕೆ.ಶ್ರೀನಿವಾಸಗೌಡ ಗುರುವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಕಚೇರಿಗೆ ಹಾಜರಾಗಿದ್ದು, ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಕಚೇರಿಗೆ ಆಗಮಿಸಿದ ಶ್ರೀನಿವಾಸ ಗೌಡ ಅವರನ್ನು ಎಸಿಬಿ ಅಧಿಕಾರಿಗಳು ಸತತ ಒಂದೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಬಿಜೆಪಿ ಮುಖಂಡರು 5 ಕೋಟಿ ರೂ.ಅನ್ನು ತಮ್ಮ ಮನೆಗೆ ತಂದಿಟ್ಟಿರುವುದಾಗಿ ಹೇಳಿಕೆ ನೀಡಿದ ಕುರಿತ ಪ್ರಶ್ನೆಗಳಿಗೆ ಶಾಸಕರು ಉತ್ತರಿಸಿದ್ದಾರೆ.

“ಮೈತ್ರಿ ಸರ್ಕಾರ ರಚನೆಯಾದ ಬಳಿಕ ಬಿಜೆಪಿ ನಡೆಸುತ್ತಿದ್ದ ಆಪರೇಷನ್‌ ಕಮಲ ತಪ್ಪಿಸಲು, ಸರ್ಕಾರ ಉಳಿಸಲು ಬಿಜೆಪಿಯಿಂದ ಮುಂಗಡವಾಗಿ ಐದು ಕೋಟಿ ರೂ. ಪಡೆದಿದ್ದಾಗಿ ಹೇಳಿಕೆ ನೀಡಿದ್ದೆ ಅಷ್ಟೇ. ಬೇರೆ ಯಾವುದೇ ಉದ್ದೇಶವಿಲ್ಲ. ನಾನು ಜೆಡಿಎಸ್‌ನ ನಿಷ್ಠಾವಂತ ಕಾರ್ಯಕರ್ತ. ಹಣ ಇತರೆ ಯಾವುದರಿಂದಲೂ ನನಗೆ ಆಮಿಷವೊಡ್ಡಲು ಸಾಧ್ಯವಿಲ್ಲ’ ಎಂದು ಹೇಳಿಕೆ ದಾಖಲಿಸಿದ್ದಾರೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next