Advertisement

ಕೌಟುಂಬಿಕ ಕಲಹ: ಬೈಚಾಪುರದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

06:54 PM Sep 22, 2022 | Team Udayavani |

ಕೊರಟಗೆರೆ: ಕೌಟುಂಬಿಕ ಕಲಹದಿಂದ ನೊಂದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಚಾಪುರ ಗ್ರಾಮದ ಬಸವನಹಳ್ಳಿಯಲ್ಲಿ ಗುರುವಾರ ನಡೆದಿದೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

Advertisement

ದೇವರಾಜು (32 ) ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಂಸಾರಿಕ ಜೀವನದಲ್ಲಿ ನೆಮ್ಮದಿ ಇಲ್ಲದೆ, ಗಂಡ- ಹೆಂಡತಿಯ ನಡುವೆ ಸಾಮರಸ್ಯ ಕೊರತೆಯಿಂದ ಕ್ಷುಲ್ಲಕ ಕಾರಣಗಳಿಗೂ ಜಗಳವಾಗಿ ದೊಡ್ಡ ವಿಕೋಪಕ್ಕೆ ಹೋಗುತ್ತಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಘಟನೆಗೂ ಮುನ್ನ ಗಂಡ ಹೆಂಡತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಪೋಷಕರು ಹಾಗೂ ಊರಿನವರ ಎದುರಲ್ಲೇ ಹಗ್ಗ ಹಿಡಿದು ಓಡಿ ಹೋಗಿ ಮನೆಯ ಪಕ್ಕದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಊರಿನವರು ಹಾಗೂ ಮನೆಯವರು ನೇಣು ಕುಣಿಕೆಯಿಂದ ತಪ್ಪಿಸಿದರಾದರೂ ಪ್ರಾಣ ಹಾರಿಹೋಗಿತ್ತು ಎನ್ನಲಾಗಿದೆ.

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಕೆ ಸುರೇಶ್ ಹಾಗೂ ಪಿಎಸ್ಐ ನಾಗರಾಜು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next