Advertisement

Family Dispute: ಬಾವನನ್ನು ಇರಿದು ಕೊಲೆಗೈದ ಬಾಮೈದ ವಶಕ್ಕೆ

10:10 AM Sep 09, 2024 | Team Udayavani |

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಭಾಮೈದನೇ ಭಾವನಿಗೆ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

Advertisement

ಹೊಸಗುಡ್ಡದಹಳ್ಳಿ ನಿವಾಸಿ ವೆಂಕಟಚಲಾಪತಿ (45) ಕೊಲೆಯಾದವ.

ಕೃತ್ಯ ಎಸಗಿದ ಆರೋಪಿ ವಿಶ್ವನಾಥ ಎಂಬಾತನ ವಶಕ್ಕೆ ಪಡೆಯಲಾಗಿದೆ. ಭಾನುವಾರ ರಾತ್ರಿ 9 ಗಂಟೆಗೆ ಮನೆ ಬಳಿ ಬಂದಿದ್ದ ವಿಶ್ವನಾಥ ಕೌಟುಂಬಿಕ ವಿಚಾರವಾಗಿ ಗಲಾಟೆ ಮಾಡಿದ್ದು ಅದು ವಿಕೋಪಕ್ಕೆ ಹೋದಾಗ ಆರೋಪಿ ಚಾಕುವಿನಿಂದ ವೆಂಕಟಚಲಾಪತಿಗೆ ಇರಿದು ಕೊಲೆ ಮಾಡಿದ್ದಾನೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಕೃತ್ಯಕ್ಕೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಭಾನುವಾರ ರಾತ್ರಿ 9 ಗಂಟೆಗೆ ಮನೆ ಬಳಿ ಬಂದಿದ್ದ ವಿಶ್ವನಾಥ ಕೌಟುಂಬಿಕ ವಿಚಾರವಾಗಿ ಗಲಾಟೆ ಮಾಡಿದ್ದು ಅದು ವಿಕೋಪಕ್ಕೆ ಹೋದಾಗ ಆರೋಪಿ ಚಾಕುವಿನಿಂದ ವೆಂಕಟಚಲಾಪತಿಗೆ ಇರಿದು ಕೊಲೆ ಮಾಡಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next