Advertisement

ಬ್ಲೇಡ್ ನಿಂದ ಕತ್ತು, ಕೈ ಕೊಯ್ದುಕೊಂಡು ಠಾಣೆ ಎದುರು ಯುವಕನ ರಂಪಾಟ: ಬೆಚ್ಚಿ ಬಿದ್ದ ನಾಗರಿಕರು

12:47 PM Jul 08, 2022 | Team Udayavani |

ಕುಣಿಗಲ್: ಕೌಟುಂಬಿಕ ಕಲಹದಿಂದ ಬೇಸತ್ತ ಯುವಕ ಕುಣಿಗಲ್ ಪೊಲೀಸ್ ಠಾಣೆ ಎದುರೇ ಬ್ಲೇಡ್ ನಿಂದ ಕತ್ತು ಹಾಗೂ ಕೈ ಕೊಯ್ದುಕೊಂಡು ಹುಚ್ಚಾಟ ಮೆರೆದ ಘಟನೆ  ಶುಕ್ರವಾರ ನಡೆದಿದೆ.

Advertisement

ತಾಲೂಕಿನ ಕಸಬಾ ಹೋಬಳಿ ಬಿಳಿದೇವಾಲಯ ಗ್ರಾಮದ ನಿವಾಸಿ ಅಬ್ರಾಜ್, ಬ್ಲೇಡ್ ನಿಂದ ಕೊಯ್ದುಕೊಂಡು ಹುಚ್ಚಾಟ ಮೆರೆದ ಯುವಕ.

ಘಟನೆಯ ವಿವರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯುವಕನ ವಿರುದ್ದ ಆಕೆಯ ಪತ್ನಿ ಕುಣಿಗಲ್ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು ಎನ್ನಲಾಗಿದ್ದು,  ಆ ವೇಳೆ ಅಲ್ಲಿಗೆ ಬಂದ ಅಬ್ರಾಜ್ ಶೆರ್ಟ್ ಬಿಚ್ಚಿ‌, ಬ್ಲೇಡ್ ನಿಂದ ಕತ್ತು, ಕೈ ಕೊಯ್ದುಕೊಂಡಿದ್ದಾನೆ.

ಇದನ್ನೂ ಓದಿ: ಶಿಂಜೋ ಅಬೆ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ: ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ

ಆತನ ಹುಚ್ಚಾಟನೊಂಡಿದ ನಾಗರೀಕರು ಬೆಚ್ಚು ಬಿದ್ದು, ಆತನನ್ನು ತಡೆಯಲು ಮುಂದಾಗಲಿಲ್ಲ. ಆತನೇ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next