Advertisement

ಗಂಡ – ಹೆಂಡತಿ ಜಗಳ: ಫೇಸ್ ಬುಕ್ ನಲ್ಲಿ ಹೆಂಡತಿ ಫೋಟೋ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ ಪತಿ.!

01:53 PM Feb 26, 2022 | Team Udayavani |

ದೊಡ್ಡಬಳ್ಳಾಪುರ: ಬರ್ತ್‌ಡೇ ಪಾರ್ಟಿ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದರಿಂದ ಗಂಡ ತನ್ನ ಫೇಸ್‌ ಬುಕ್‌ನ ಖಾತೆಯಲ್ಲಿ ಹೆಂಡತಿಯ ಫೋಟೋ ಹಾಕಿ ಶ್ರದ್ಧಾಂಜಲಿ ಸಲ್ಲಿಸಿ ಪೋಸ್ಟ್ ಮಾಡಿರುವ ಘಟನೆ  ದೊಡ್ಡಬಳ್ಳಾಪುರ ತಾಲೂಕಿನ ಉದನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಹೆಂಡತಿ ಕಾಣೆಯಾಗಿದ್ದು, ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತಾಲೂಕಿನ ಉದನಹಳ್ಳಿಯ ಆರ್ಕೆಸ್ಟ್ರಾ ಕಲಾವಿದ ಮುನಿಕೃಷ್ಣ ತನ್ನ ಹೆಂಡತಿ ಲೀಲಾವತಿ (22) ಪೋಟೋವನ್ನು ಫೇಸ್‌ ಬುಕ್‌ನಲ್ಲಿ ಪೋಸ್ಟ್ ಮಾಡಿ ಆರ್‌ಐಪಿ ಎಂದು ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಪೋಸ್ಟ್ ನೋಡಿ ಗಾಬರಿಗೊಂಡ ಪೋಷಕರು ಆಕೆಗಾಗಿ ಹುಡುಕಾಡಿದಾಗ ಕಾಣೆಯಾಗಿರುವುದು ಗೊತ್ತಾಗಿದೆ. ಫೇಸ್‌ಬುಕ್‌ ಅಕೌಂಟಿನಲ್ಲಿ ಹೆಂಡತಿಯ ಫೋಟೋ ಹಾಕಿ ಆರ್‌ಐಪಿ ಎಂದು ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ನೋಡಿ ಗಾಬರಿಗೊಂಡ ಲೀಲಾವತಿ ತಂದೆ, ಉದನಹಳ್ಳಿಗೆ ಬಂದು ಮಗಳನ್ನು ಹುಡುಕಾಡಿದ್ದಾರೆ. ಮಗಳು ಇಲ್ಲದಿರುವುದನ್ನು ನೋಡಿ ಮುನಿಕೃಷ್ಣನೇ ಹೊಡೆದು ಸಾಯಿಸಿದ್ದಾನೆಂದು ಎಂದು ಆರೋಪಿಸಿದ್ದಾರೆ.

ಪೊಲೀಸರು ಮುನಿಕೃಷ್ಣನನ್ನು ಠಾಣೆಗೆ ಕರೆದು ವಿಚಾರಣೆ ಮಾಡಿದ್ದು, ಲೊಕೇಶನ್‌ ಪತ್ತೆ ಮಾಡಿದಾಗ ಲೀಲಾವತಿ ತಿರುಪತಿಯಲ್ಲಿರುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ತನಿಖೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next