Advertisement

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

12:15 PM Jul 04, 2024 | Team Udayavani |

ಬೆಂಗಳೂರು: ಯುವತಿಯೊಬ್ಬಳು ಅನುಮಾನಾಸ್ಪವಾಗಿ ಮೃತಪಟ್ಟಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿ ಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Advertisement

ದಾಸರಹಳ್ಳಿ ನಿವಾಸಿ ಶ್ರಾವಣಿ(23) ಮೃತ ಯುವತಿ.

8ನೇ ಮೈಲಿಯಲ್ಲಿರುವ ಗೋಲ್ಡನ್‌ ಜೀಮ್‌ನಲ್ಲಿ ಸ್ವಾಗತಕಾರಿಣಿ ಯಾಗಿ ಕೆಲಸ ಮಾಡುತ್ತಿದ್ದ ಶ್ರಾವಣಿ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕೆಲಸಕ್ಕೆ ಬಂದಿದ್ದು, ಕೆಲ ಹೊತ್ತಿನ ಬಳಿಕ ಏಕಾಏಕಿ ವಾಂತಿ ಶುರುವಾಗಿದೆ. ಅದನ್ನು ಕಂಡ ಜಿಮ್‌ನಲ್ಲಿದ್ದ ಕೆಲವರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ತಡರಾತ್ರಿ ಮೃತಪ್ಟಟಿದ್ದಾಳೆ ಎಂದು ಪೊಲೀಸರು ಹೇಳಿದರು.

ವಿಷ ಸೇವಿಸಿ ಆತ್ಮಹತ್ಯೆ?: ಶ್ರಾವಣಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದೆ. ಈ ಮಧ್ಯೆ ಆಕೆಯ ಮನೆಯವರು ಮದುವೆ ಮಾಡಲು ಬೇರೆ ಹುಡುಗನನ್ನು ಹುಡುಕುತ್ತಿದ್ದರು. ಆದರೆ, ಆಕೆ ಸದ್ಯ ಮದುವೆ ಮಾಡಿಕೊಳ್ಳುವುದಿಲ್ಲ ಎಂದು ಪೋಷಕರಿಗೆ ಹೇಳಿದ್ದಾಳೆ. ಅದೇ ವಿಚಾರವಾಗಿ ಪೋಷಕರು ಹಾಗೂ ಆಕೆ ನಡುವೆ ಜಗಳ ನಡೆದಿದೆ ಎಂಬುದು ಗೊತ್ತಾಗಿದೆ. ಅದರಿಂದ ಬೇಸತ್ತ ಶ್ರಾವಣಿ ಸ್ಲೋ ಪಾಯಿಸನ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆಯಿದೆ. ಅದರಿಂದ ಸೋಮವಾರ ಬೆಳಗ್ಗೆ ವಾಂತಿ ಹೆಚ್ಚಾಗಿ, ಮೃತಪಟ್ಟಿರುವ ಸಾಧ್ಯತೆಯಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಘಟನೆಗೆ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಪೊಲೀಸರು ಹೇಳಿದರು.

ಈ ಸಂಬಂಧ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next