Advertisement

ಒಪ್ಪೊತ್ತಿನ ಕೂಳಿಗಾದರೂ ಮುಂದಾಗಿ: ದರ್ಶನ್‌

10:17 AM Mar 31, 2020 | Suhan S |

ಕೋವಿಡ್ 19 ಎಫೆಕ್ಟ್ ನಿಂದಾಗಿ ಇಡಿಈ ದೇಶವೇ ಸ್ತಬ್ಧವಾಗಿದೆ. ಸಾಕಷ್ಟು ಮಂದಿ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಅನೇಕರು ಬಡ ಜನರ ಸಹಾಯಕ್ಕೆ ಧಾವಿಸುತ್ತಿದ್ದಾರೆ. ಸಿನಿಮಾ ಮಂದಿ ಕೂಡಾ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಸ್ಟಾರ್‌ ನಟರ ಅಭಿಮಾನಿ ಸಂಘಗಳು ಕೂಡಾ ಕಾರ್ಯಪ್ರವೃತ್ತರಾಗಿವೆ.

Advertisement

ಈ ಸಂದರ್ಭದಲ್ಲಿ ನಟ ದರ್ಶನ್‌ ಟ್ವೀಟ್‌ ಮಾಡಿ ಒಂದು ಸಲಹೆ ನೀಡಿದ್ದಾರೆ. ಈ ಸಮಯದಲ್ಲಿ ನಾನೊಂದು ಸಣ್ಣ ಸಲಹೆ ನೀಡಲು ಇಚ್ಛಿಸುತ್ತೇನೆ. ದಿನನಿತ್ಯ ನೀವು ಮಡುವ ಅಡುಗೆಯಲ್ಲಿ ಸ್ವಲ್ಪ ಹೆಚ್ಚು ಜನರಿಗಾಗುವಂತೆ ಮಾಡಿ, ನಿಮ್ಮ ಅಕ್ಕಪಕ್ಕದ ಬಡಜನರಿಗೆ ಒಪ್ಪೊತ್ತು ಕೂಳಿಗಾದರೂ ನೆರವಾದರೆ ಒಳಿತು ಎಂಬುದು ನನ್ನ ಭಾವನೆ. ಸಾಧ್ಯವಾದಷ್ಟೂ ನಿಮ್ಮ ಕೈಲಾಗುವ ಈ ಕೆಲಸ ಅನೇಕ ಕುಟುಂಬಗಳು ಚೇತರಿಸಿಕೊಳ್ಳಬಹುದು’ ಎಂದು ದರ್ಶನ್‌ ಟ್ವೀಟ್‌ ಮಾಡಿದ್ದಾರೆ.

ಈಗಾಗಲೇ ದರ್ಶನ್‌ ಅಭಿಮಾನಿಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ಹಸಿದವರಿಗೆ ಊಟದ ವ್ಯವಸ್ಥೆ, ತುರ್ತಾಗಿ ಬೇಕಾದಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ ಮಾಡಿದ್ದಾರೆ. ದೇಶದ ಲಾಕ್ ಡೌನ್‌ ಮುಗಿಯುವವರೆಗೆ ಇದನ್ನು ಮುಂದುವರೆಸಲಿದ್ದಾರೆ. ಬಹುತೇಕ ಸ್ಟಾರ್‌ ನಟರ ಅಭಿಮಾನಿಗಳು ಕಷ್ಟದ ಸಮಯದಲ್ಲಿ ತಮ್ಮ ಕೈಲದ ಸಹಾಯ ಮಾಡುತ್ತಾ ಮಾನವೀಯತೆ ಮೆರೆಯುತ್ತಿರುತ್ತಾರೆ. ಅದು ಈ ಬಾರಿಯೂ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next