Advertisement

ನಟ ದರ್ಶನ್ ಮೇಲೆ ಚಪ್ಪಲಿ ಎಸೆತ ಖಂಡಿಸಿ ಅಭಿಮಾನಿಗಳ ಪ್ರತಿಭಟನೆ

07:30 PM Dec 29, 2022 | Team Udayavani |

ಗಂಗಾವತಿ: ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದಿರುವುದನ್ನು ಖಂಡಿಸಿ, ಕರುನಾಡ ಕಲಾರತ್ನ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದಿಂದ ನಗರ ದ ಕೃಷ್ಣದೇವರಾಯ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

Advertisement

ಜಿಲ್ಲಾಧ್ಯಕ್ಷ ಮಂಜುನಾಥ ಗಜ ಮಾತನಾಡಿ, ಹೊಸಪೇಟೆ ನ ಗರದಲ್ಲಿ ಕ್ರಾಂತಿ ಚಲನಚಿತ್ರದ ಧ್ವನಿ ಸುರಳಿ ಬಿಡುಗಡೆ ಕಾ ರ್ಯಕ್ರಮದಲ್ಲಿ ದರ್ಶನ್ ಮೇಲೆ ಕೆಲ ಕಿಡಿಗೇಡಿಗಳು ಚಪ್ಪಲಿ ಎಸೆದಿದ್ದು ಖಂಡನೀಯ.ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರನ್ನು ಬಂಧಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಾಂ ತ ಧರಣಿ, ಪ್ರತಿಭಟನೆ, ಹೋರಾಟ ನಡೆಸಲಾಗುತ್ತದೆ ಎಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.

ಇದಕ್ಕು ಮುನ್ನ ಕರುನಾಡ ಕಲಾರತ್ನ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದ ಸದಸ್ಯರು ಸಿಬಿಎಸ್ ವೃತ್ತದಿಂದ ಮಹಾವೀರ, ಗಾಂಧಿ, ಬಸವಣ್ಣ, ಕಲ್ಮಠ ವೃತ್ತ ಮಾರ್ಗವಾಗಿ ಕೃಷ್ಣದೇವರಾಯ ವೃತ್ತದವರೆಗೆ ರ‍್ಯಾಲಿ ಮಾಡಲಾಯಿತು. ದರ್ಶನ್ ಅಭಿಮಾನಿಗಳಾದ ರಮೇಶ, ಚೌಡಪ್ಪ, ದುರ್ಗೇಶ, ಸುಭಾಷ್, ಮೈಬೂ, ಶರಣಪ್ಪ, ಹುಲ್ಲೇಶ, ವಿಜಯ ಮಹಾಂತೇಶ ಸೇರಿ ಅಭಿಮಾನಿಗಳು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next