Advertisement

ಚಿನ್ನಸ್ವಾಮಿ ಕ್ರೀಡಾಂಗಣದ ಮೇಲ್ಛಾವಣಿ ಸೋರಿಕೆ :ಟ್ರೋಲ್ ಗೆ ಗುರಿಯಾದ ಬಿಸಿಸಿಐ

02:03 PM Jun 20, 2022 | Team Udayavani |

ಬೆಂಗಳೂರು : ಭಾನುವಾರ ನಡೆದ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ನಿರ್ಣಾಯಕ ಟಿ 20  ಪಂದ್ಯ ಮಳೆಯಲ್ಲಿ ಕೊಚ್ಚಿ ಹೋಗಿದ್ದು ಒಂದೆಡೆಯಾದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮೇಲ್ಛಾವಣಿ ಸೋರಿಕೆಯಾಗಿರುವುದು ಅಭಿಮಾನಿಗಳು ಬಿಸಿಸಿಐ ಅನ್ನು ಟ್ರೋಲ್ ಮಾಡುವಂತೆ ಮಾಡಿದೆ.

Advertisement

ಪಂದ್ಯ ಭಾರಿ ಮಳೆಯಿಂದಾಗಿ ರದ್ದಾಗಿದ್ದು, ಕ್ರೀಡಾಂಗಣದ ಮೇಲ್ಛಾವಣಿ ಸೋರಿಕೆಯಿಂದಾಗಿ ಅಭಿಮಾನಿಗಳು ಪರದಾಡಬೇಕಾಯಿತು. ಈ ಕುರಿತು ಸಾಮಾಜಿಕ ತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು, ಹಲವರು ಬಿಸಿಸಿಐ ಅನ್ನುಟ್ರೊಲ್ ಮಾಡಿದ್ದಾರೆ.

ಭಾನುವಾರ ಮಳೆ ಸುರಿಯುತ್ತಿದ್ದರೂ, ಅಭಿಮಾನಿಗಳು ಪಂದ್ಯ ಮತ್ತೆ ಪ್ರಾರಂಭವಾಗುವ ನಿರೀಕ್ಷೆಯಲ್ಲಿ ಕ್ರೀಡಾಂಗಣದಲ್ಲಿ ಕಾಯುತ್ತಿದ್ದರು. ದುರದೃಷ್ಟವಶಾತ್, ಮೇಲ್ಛಾವಣಿಯಲ್ಲಿ ನೀರಿನ ಸೋರಿಕೆಯಿಂದಾಗಿ ಅಭಿಮಾನಿಗಳು ಕೆಟ್ಟ ಅನುಭವ ಪಡೆಯಬೇಕಾಯಿತು.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕ್ರೀಡಾಂಗಣಗಳು ಮತ್ತು ಸೌಲಭ್ಯಗಳನ್ನು ನವೀಕರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿರುವುದರಿಂದ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next