Advertisement

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

07:41 PM May 15, 2024 | Team Udayavani |

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಮಾರಿಪಳ್ಳ ಸುಜೀರ್‌ ಕ್ರಾಸ್‌ನಲ್ಲಿ ಮೇ 14ರಂದು ಸಂಜೆ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹಸವಾರ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಕಾರ್ಕಳ ನಿವಾಸಿ ಪ್ರಸಾದ್‌ (20) ಮೃತಪಟ್ಟ ಸಹಸವಾರ. ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

ಘಟನೆಯಲ್ಲಿ ಉತ್ತರಪ್ರದೇಶ ಮೂಲದ ಸವಾರ ಸೋನು (19) ಮೇ 14ರಂದೇ ಅಪಘಾತ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದರು.

ಲಾರಿ ಚಾಲಕನ ದುಡುಕುತನ ಹಾಗೂ ನಿರ್ಲಕ್ಷÂತನದಿಂದ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿ ನೀಡಿದ ದೂರಿನಂತೆ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ನೆಲ್ಯಾಡಿಯ ಹೊಟೇಲೊಂದರಲ್ಲಿ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಅಲ್ಲಿಂದ ಮಂಗಳೂರಿಗೆ ತೆರಳುತ್ತಿರುವಾಗ ಘಟನೆ ಸಂಭವಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next