Advertisement

ಹಾವು ಕಚ್ಚಿ ರೈತ ಸಾವು

12:00 PM Nov 02, 2021 | Team Udayavani |

ಹರಪನಹಳ್ಳಿ: ಜಮೀನಿಗೆ ನೀರು ಹಾಯಿಸಲು ಹೋದ ಸಮಯದಲ್ಲಿ ವಿಷಪೂರಿತ ಹಾವು ಕಚ್ಚಿ ರೈತನೋರ್ವ ಮೃತಪಟ್ಟ ಘಟನೆ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

Advertisement

ಮಾಳಪ್ನರ್ ಪರಶುರಾಮ(45) ಎಂಬ ರೈತ ಮೃತ ದುರ್ದೈವಿ. ಈತ ಸೋಮವಾರ ಮಧ್ಯಾಹ್ನ ಕೃಷಿ ಜಮೀನಿನಲ್ಲಿ ನೀರು ಹಾಯಿಸುವ ವೇಳೆ ಹಾವು ಕಚ್ಚಿದೆ. ಕಚ್ಚಿದ ತಕ್ಷಣ ಬೈಕ್ ಮೂಲಕ ಹರಪನಹಳ್ಳಿ ಸಾವ೯ಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಈ ಕುರಿತು ಹಲುವಾಗಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ರೈತ ಕುಟುಂಬಕ್ಕೆ ಸಕಾ೯ರ ಪರಿಹಾರ ನೀಡಬೇಕೆಂದು ಸಂಬಂಧಿಕರು ಒತ್ತಾಯಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next