Advertisement

ಸಾಲಬಾಧೆ : ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು

07:32 PM Jun 28, 2021 | sudhir |

ವಿಜಯಪುರ : ಸಾಲ ಬಾಧೆ ತಾಳದೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಇಂಡಿ ತಾಲೂಕಿನಿಂದ ವರದಿಯಾಗಿದೆ.

Advertisement

ಇಂಡಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರೈತನನ್ನು ಬಶೀರ ಬುರಾನ ಪಟೇಲ (35) ಎಂದು ಗುರುತಿಸಲಾಗಿದೆ.

ಮೃತ ರೈತ ಇಂಗಳಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಲಕ್ಷ ರೂ, ಖಾಸಗಿಯಾಗಿ 2 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ.

ಮೃತ ರೈತನಿಗೆ ಪತ್ನಿ, ಮೂವರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಇದ್ದಾರೆ. ಈ ಕುರಿತು ಇಂಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಕೋವಿಡ್: ರಾಜ್ಯದಲ್ಲಿಂದು 5933 ಸೋಂಕಿತರು ಗುಣಮುಖ;  2576 ಹೊಸ ಪ್ರಕರಣ ದೃಢ

Advertisement
Advertisement

Udayavani is now on Telegram. Click here to join our channel and stay updated with the latest news.

Next