Advertisement

ಸಿಎಂಗೆ ಸೆಲ್ಫಿ ವಿಡಿಯೋ ಮಾಡಿ ರೈತ ಆತ್ಮಹತ್ಯೆ

07:43 AM Jun 18, 2019 | Team Udayavani |

ಕೆ.ಆರ್‌.ಪೇಟೆ: ತಾಲೂಕಿನ ಅಘಲಯ ಗ್ರಾಮದ ರೈತನೊಬ್ಬ ಬರಪೀಡಿತ ಸಂತೇಬಾಚಹಳ್ಳಿ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮನವಿ ಮಾಡಿ, ತನ್ನ ಜಮೀನಿನ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಲ್ಲದೆ, ಆತ್ಮಹತ್ಯೆಯ ದೃಶ್ಯವನ್ನು ಸೆಲ್ಫಿ ವಿಡಿಯೋದಲ್ಲಿ ಸೆರೆ ಹಿಡಿದಿದ್ದಾನೆ.

Advertisement

ಅಘಲಯ ಗ್ರಾಮದ ಸುರೇಶ್‌(50) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಸುಮಾರು ಎರಡೂವರೆ ಎಕರೆ ಜಮೀನು ಮತ್ತು ತೋಟ ಹೊಂದಿರುವ ಸುರೇಶ್‌, ಲಕ್ಷಾಂತರ ರೂ.ಸಾಲ ಮಾಡಿದ್ದರು. ಮಳೆ ಇಲ್ಲದೆ ಕೊಳವೆ ಬಾವಿಗಳು ಬತ್ತಿ ಹೋಗಿದ್ದವು. ತೋಟದಲ್ಲಿನ ತೆಂಗು, ಅಡಕೆ ಮರಗಳು ಒಣಗುತ್ತಿದ್ದವು. ಇದನ್ನು ನೋಡಲಾಗದೇ ತನ್ನ ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ನಾನು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಟ್ಟಾಭಿಮಾನಿ. ನನ್ನ ಅಂತಿಮ ದರ್ಶನಕ್ಕೆ ನೀವು ಬರಬೇಕು. ಹೋಬಳಿಯ ಎಲ್ಲಾ ಕೆರೆಗಳನ್ನು ತುಂಬಿಸಬೇಕು’ ಎಂದು ಮನವಿ ಮಾಡಿದ್ದಾರೆ. ಮೃತ ಸುರೇಶ್‌ ಅವರ ಅಂತ್ಯಕ್ರಿಯೆ ಮುಗಿದ ಬಳಿಕ ಮನೆಗೆ ಬಂದು ಸುರೇಶ್‌ ಅವರ ಮೊಬೈಲ್‌ ಆನ್‌ ಮಾಡಿ ನೋಡಿದಾಗ ಅವರು ಸೆಲ್ಫಿ ವಿಡಿಯೋ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next