Advertisement

21ಕ್ಕೆ ಬೆಂಗಳೂರಿನಲ್ಲಿ ರೈತ ಸಮಾವೇಶ

12:00 PM Apr 15, 2022 | Team Udayavani |

ಲಿಂಗಸುಗೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ ಏ.21ರಂದು ಬೆಂಗಳೂರಿನಲ್ಲಿ ರೈತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ತಾಲೂಕು ಗೌರವಾಧ್ಯಕ್ಷ ಕುಪ್ಪಣ್ಣ ಮಾಣಿಕ್‌ ಹೇಳಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆದಿದೆ. ಆದರೆ, ರಾಜ್ಯ ಸರ್ಕಾರ ವಾಪಸ್‌ ಪಡೆಯುವಲ್ಲಿ ವಿಳಂಬ ತಂತ್ರಗಳನ್ನು ನಡೆಸುತ್ತಿದೆ. ಅಧಿವೇಶನದಲ್ಲಿ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವ ಭರವಸೆ ಮುಖ್ಯಮಂತ್ರಿಗಳು ನೀಡಿದ್ದರು. ಆದರೆ, ಈವರಿಗೂ ಕಾಯ್ದೆಗಳನ್ನು ವಾಪಸ್‌ ಪಡೆದಿಲ್ಲ, ವಾಪಸ್‌ ಪಡೆಯಲು ಒತ್ತಾಯಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ದೆಹಲಿ ಸಿಎಂ ಅರವಿಂದ್‌ ಕ್ರೇಜಿವಾಲ್‌, ಪಂಜಾಬ್‌ ಸಿಎಂ ಭಗವಂತ ಮಾನೆ ಭಾಗವಹಿಸಲಿದ್ದಾರೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಶಿವಪುತ್ರಗೌಡ ನಂದಿಹಾಳ, ಜಿಲ್ಲಾ ಉಪಾಧ್ಯಕ್ಷ ಬಸನಗೌಡ ಹಿರೇಹೆಸರೂರು, ಖಾಜಾವಲಿ, ಸಹದೇವಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next