Advertisement

ಅಕಾಲಿಕ ಮಳೆಯಿಂದ ಬೆಳೆ ಹಾನಿ-ಬಡಕಾನಶಿರಡಾ ರೈತರಿಗೆ ಸಂಕಷ್ಟ

08:41 PM Nov 17, 2021 | Team Udayavani |

ದಾಂಡೇಲಿ: ಕಳೆದೆರಡು ದಿನಗಳಿಂದ ತೀವ್ರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಾಂಡೇಲಿ ತಾಲೂಕಿನ ಕೋಗಿಲಬನ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿರುವ ಬಡಕಾನಶಿರಡಾ ಗ್ರಾಮದ ಸುಮಾರು ಹದಿನೈದಕ್ಕೂ ಹೆಚ್ಚು ರೈತರು ಬೆಳೆದ ಬೆಳೆಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿರುವ ಘಟನೆ ಬುಧವಾರ ನಡೆದಿದೆ.

Advertisement

ಕಳೆದೆರಡು ದಿನಗಳಿಂದ ಸುರಿದ ಏಕಾಏಕಿ ಮಳೆಗೆ ಬಡಕಾನಶಿರಡಾ ಗ್ರಾಮದ ರೈತರ ಗದ್ದೆಗಳೆಲ್ಲ ಜಲಾವೃತಗೊಂಡಿದ್ದು, ಬೆಳೆ ಹಾನಿ ಸಂಭವಿಸಿದೆ. ಕೃಷಿ ಚಟುವಟಿಕೆಗಳನ್ನು ನಂಬಿಕೊಂಡಿರುವ ರೈತರಿಕೆ ಅಕಾಲಿಕ ಮಳೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಬೆಳೆ ಹಾನಿಗೊಂಡು ಕಂಗಲಾಗಿರುವ ರೈತರಿಗೆ ಸೂಕ್ತ ರೀತಿಯ ಪರಿಹಾರವನ್ನು ಕೊಡಿಸುವ ನಿಟ್ಟಿನಲ್ಲಿ ತಾಲೂಕಾಡಳಿತ ಅಗತ್ಯ ಕ್ರಮವನ್ನು ಕೈಗೊಳ್ಳಬೇಕಾಗಿದೆ.

ಇದನ್ನೂ ಓದಿ : ಒಳ ಹರಿವು ಹೆಚ್ಚಳದಿಂದ ರಸ್ತೆಗೆ ಹರಿದ ನೀರು: ಕೊಚ್ಚಿಕೊಂಡು ಹೋದ ನಿಲ್ಲಿಸಿದ್ದ ಕಾರು

Advertisement

Udayavani is now on Telegram. Click here to join our channel and stay updated with the latest news.

Next