Advertisement

ನಮಗೂ ಹಕ್ಕು ಪತ್ರ ಕೊಡಿ, ರೈತರಿಂದ ಬೆತ್ತಲೆ, ಅರೆಬೆತ್ತಲೆ ಪ್ರತಿಭಟನೆ

05:45 PM Jun 12, 2017 | Team Udayavani |

ಹಾವೇರಿ: ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ರೈತರೊಬ್ಬರು ಬೆತ್ತಲೆಯಾಗಿ ಪ್ರತಿಭಟಿಸಿದ ಘಟನೆ ಸೋಮವಾರ ನಡೆಯಿತು. 

Advertisement

ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಕಾರ್ಯಕರ್ತರು ನಗರದ ಮುರುಘಾರಾಜೇಂದ್ರ ಮಠದಿಂದ ಅರೆಬೆತ್ತಲೆ ಪ್ರತಿಭಟನೆ ಪ್ರಾರಂಭಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಕೆಲವು ರೈತರು ಬೇವಿನಸೊಪ್ಪು ಕಟ್ಟಿಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಈ ವೇಳೆ ರಾಣಿಬೆನ್ನೂರು ತಾಲೂಕಿನ ಹನುಮಾಪುರ ಗ್ರಾಮದ ಕಾಳಪ್ಪ ಲಮಾಣಿ ಎಂಬ ರೈತ ಪೂರ್ಣ ಬೆತ್ತಲಾಗಿ ಪ್ರತಿಭಟಿಸಿದ ಘಟನೆ ನಡೆಯಿತು. ರೈತ ಚಂದಪ್ಪ ಎಂಬವರು ವಿಷ ಸೇವಿಸಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next