Advertisement

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸ್ ವಶಕ್ಕೆ

12:24 PM Apr 10, 2021 | Team Udayavani |

ಬೆಳಗಾವಿ: ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಬೆಳಗಾವಿ ಕ್ಯಾಂಪ್ ಪೊಲೀಸರು ಶನಿವಾರ (10-4-2021) ಬೆಳಗ್ಗೆ ವಶಕ್ಕೆ ಪಡೆದುಕೊಂಡರು.

Advertisement

ಬೆಳಗಾವಿಯ ಸುವರ್ಣ ಸೌಧದ ಬಳಿಯ ಸಭಾಂಗಣದಲ್ಲಿ ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ಕೋಡಿಹಳ್ಳಿ ಆಗಮಿಸಿದ್ದರು. ನಗರದ ಹೊಟೇಲ್ ಒಂದರಲ್ಲಿ ತಂಗಿದ್ದಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಸಭೆ ನಡೆಸಲು ಆಗಮಿಸಿದ್ದ ಅವರು ಅನುಮತಿ ಪಡೆದಿರಲಿಲ್ಲ. ಹೀಗಾಗಿ ಸಭೆಗೆ ತೆರಳುತ್ತಿದ್ದ ವೇಳೆ ಚನ್ನಮ್ಮ ವೃತ್ತದ ಬಳಿಯ ಮಿಲನ್ ಹೋಟೆಲ್‍ನಿಂದ ಹೊರ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next