Advertisement

ಟಿಕಾಯತ್‌ ಮೇಲೆ ಹಲ್ಲೆ ಖಂಡನೀಯ: ಕೋಡಿಹಳ್ಳಿ ಚಂದ್ರಶೇಖರ್‌

06:16 PM May 31, 2022 | Team Udayavani |

ಬೆಂಗಳೂರು: ರೈತ ಸಂಘದ ರಾಷ್ಟ್ರೀಯ ನಾಯಕರಾದ ರಾಕೇಶ್‌ ಟಿಕಾಯತ್‌, ಯುದ್ಧವೀರ್‌ಸಿಂಗ್‌ ಅವರ ಮೇಲೆ ಹಲ್ಲೆ ನಡೆಸಿ ಮಸಿ ಎರಚಿರುವುದು ಅತ್ಯಂತ ಖಂಡನೀಯ. ಈ ರೀತಿಯ ಘಟನೆಗಳು ನಡೆಯಬಾರದಿತ್ತು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದರು.

Advertisement

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರದ ರೈತ ಮುಖಂಡರ ಪರವಾಗಿ ಹೋರಾಟ ನಡೆಸುವವರ ಕುರಿತು ಸರ್ಕಾರಕ್ಕೆ ಎಚ್ಚರ ಇರಬೇಕು. ಟಿಕಾಯತ್‌ರಂತಹ ನಾಯಕ ಬೆಂಗಳೂರಿಗೆ ಬಂದಿರುವ ಸಂಬಂಧ ಪೊಲೀಸ್‌ ಅಧಿಕಾರಿಗಳ ರಕ್ಷಣೆ ನೀಡಬೇಕಾಗಿತ್ತು. ಆದರೆ, ಪೊಲೀಸ್‌ ಇಲಾಖೆ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಿದರು.

ನನ್ನ ಜೀವನದಲ್ಲಿ ಹಲವು ಚಳವಳಿಗಳಲ್ಲಿ ಭಾಗಿಯಾಗಿದ್ದೇನೆ. ಎಲ್ಲಿಯಾದರೂ ದುರ್ಬಳಕೆ ಮಾಡಿಕೊಂಡಿದ್ದಲ್ಲಿ ನಾನೇ ಚಳವಳಿಯಿಂದ ಸಂಪೂರ್ಣ ದೂರ ಉಳಿಯುತ್ತೇನೆ. ಎಲ್ಲ ಆರೋಪಗಳ ಕುರಿತು ತನಿಖೆ ಎದುರಿಸಲು ಸಿದ್ದವಿದ್ದೇನೆ. ನನ್ನ ವಿರುದ್ಧ ಸಾಕ್ಷ್ಯಗಳಿದ್ದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next