Advertisement

ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಇಂದು ರೈತರಿಂದ ದೇಶಾದ್ಯಂತ 4 ತಾಸು ರೈಲು ತಡೆ

10:57 AM Feb 18, 2021 | Team Udayavani |

ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಗುರುವಾರ(ಫೆ.18, 2021) 12ಗಂಟೆಯಿಂದ ನಾಲ್ಕು ಗಂಟೆವರೆಗೆ ದೇಶಾದ್ಯಂತ ರೈಲು ತಡೆ ಚಳವಳಿ ನಡೆಸುವುದಾಗಿ ಘೋಷಿಸಿದೆ.

Advertisement

ಕಿಸಾನ್ ಆಂದೋಲನ್ ಸಮಿತಿಯ ವಕ್ತಾರ ಜಗ್ತಾರ್ ಸಿಂಗ್ ಬಜ್ವಾ ಗಾಜಿಪುರ್ ಗಡಿಯಲ್ಲಿ ಮಾತನಾಡುತ್ತ, ನಾವು ಶಾಂತಿಯುತವಾಗಿ ರೈಲು ತಡೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಪ್ರತಿಭಟನೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುವುದನ್ನು ನಿವಾರಿಸುವ ನಿಟ್ಟಿನಲ್ಲಿ ಉಪಹಾರವನ್ನು ನೀಡುವುದಾಗಿ ತಿಳಿಸಿದರು.

ಇಂದು 12ಗಂಟೆಯಿಂದ 4 ಗಂಟೆವರೆಗೆ ರೈಲು ತಡೆ ನಡೆಸಿ ಪ್ರತಿಭಟಿಸಲಿದ್ದು, ಪ್ರಯಾಣಿಕರ ಅನನುಕೂಲತೆಯನ್ನು ತಪ್ಪಿಸಲು ಉಪಹಾರದ ಆಫರ್ ನೀಡಲಿದ್ದೇವೆ ಎಂದು ಸಿಂಗ್ ಹೇಳಿದರು. ನಾವು ರೈಲು ಮತ್ತು ಪ್ರಯಾಣಿಕರನ್ನು ಹೂವಿನ ಹಾರವನ್ನು ನೀಡುವ ಮೂಲಕ ಸ್ವಾಗತಿಸಲಿದ್ದೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಪಂಜಾಬ್, ಹರ್ಯಾಣ ರೈತರು ದೆಹಲಿ ಗಡಿಯಲ್ಲಿ ಕಳೆದ 70ಕ್ಕೂ ಅಧಿಕ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕೆಂಬ ರೈತರ ಬೇಡಿಕೆಯನ್ನು ಮನ್ನಿಸದ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಹಂತದ ಪ್ರತಿಭಟನೆ ಹಮ್ಮಿಕೊಳ್ಳಲು ರೈತ ಸಂಘಟನೆಗಳು ಮುಂದಾಗಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next