Advertisement

ರೈತರ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜಮೀನಿನಲ್ಲಿಯೇ ಚಾಲನೆ

03:33 PM Aug 17, 2020 | Suhan S |

ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯ ಆ್ಯಪ್‌ನಿಂದ ರೈತರ ಜಮೀನಿಗೆ ತೆರಳಿ ರೈತರಿಂದಲೇ ಬೆಳೆಯನ್ನು ನಮೂದಿಸುವ ಕಾರ್ಯಕ್ಕೆ ಸಕ್ಕರೆ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಚಾಲನೆ ನೀಡಿದರು.

Advertisement

ಬಿಣಗಾ ಗ್ರಾಮದ ರೈತ ವಾಸು ದಿಲಗಾ ಗೌಡ ಅವರ ಜಮೀನಿನಲ್ಲಿ ಬೆಳೆದ ಭತ್ತದ ಬೆಳೆಯ ಛಾಯಾಚಿತ್ರ ಅಪ್‌ಲೋಡ್‌ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬೆಳೆ ಸಮೀಕ್ಷೆ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೇ ನಂಬರ್‌, ಹಿಸ್ಸಾ ನಂಬರ್‌ವಾರು ತಾವು ಬೆಳೆದ ಬೆಳೆ ವಿವರವನ್ನು ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಸ್ವತಃ ತಾವೇ ನೋಂದಾಯಿಸಬಹುದಾಗಿದೆ ಎಂದು ತಿಳಿಸಿದರು. ಬೆಳೆ ನಮೂದಿಸಲು ಆ. 24 ಕೊನೆಯ ದಿನವಾಗಿದ್ದು, ರೈತರು ನಿಗದಿತ ಸಮಯದಲ್ಲಿ ತಾವು ಬೆಳೆದ ಬೆಳೆ ವಿವರ ಅಪ್‌ಲೋಡ್‌ ಮಾಡಬೇಕು. ಈ ಸಮೀಕ್ಷೆಯಿಂದ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆಯಡಿ ಸರ್ವೇ ನಂಬರ್‌ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಫಲಾನುಭವಿ ಆಧಾರಿತ ವಿವಿಧ ಯೋಜನೆ ಅನುಷ್ಠಾನಕ್ಕೆ ಸಹಾಯವಾಗಲಿದೆ ಎಂದರು.

ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ತಮ್ಮ ಭಾಗದ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದರು. ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಧಕಾರಿ ಡಾ| ಕೆ. ಹರೀಶ ಕುಮಾರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್‌.ಕೆ., ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪಗೌಡ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next