Advertisement

ಕೃಷಿ ಕಾಯ್ದೆ ರದ್ದತಿಗೆ ರೈತರ ಆಗ್ರಹ

12:28 PM Feb 07, 2021 | Team Udayavani |

ಆಳಂದ: ಕೇಂದ್ರದ ಕೃಷಿ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿ ಸಿ ಶನಿವಾರ ಕರೆ ನೀಡಿದ್ದ ಹೆದ್ದಾರಿ ತಡೆಗೆ ಬೆಂಬಲಿಸಿ ಪಟ್ಟಣದ ಹಳೆಯ ಚೆಕ್‌ಪೋಸ್ಟ್‌ನ ವಾಗರಿ, ರಿಬ್ಬನಪಲ್ಲಿ ರಾಜ್ಯ ಹೆದ್ದಾರಿ ತಡೆದು ರೈತಪರ ಸಂಘಟನೆಗಳ ಕಾರ್ಯಕರ್ತರು ಕೆಲಕಾಲ ಪ್ರತಿಭಟನೆ ನಡೆಸಿದರು.

Advertisement

ಕಿಸಾನಸಭಾ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ, ಮುಖಂಡ ರಮೇಶ ಲೋಹಾರ, ಪ್ರಾಂತರೈತ ಸಂಘದ ಜಿಲ್ಲಾ ಮುಖಂಡ ಪಾಂಡುರಂಗ ಮಾವೀನಕರ್‌, ಆಸಾ ಕ್‌ ಮುಲ್ಲಾ ಪ್ರಕಾಶ ಜಾನಿ ಮತ್ತಿತರ ಸಂಘಟನೆಗಳನ್ನು ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯುವ ವರೆಗೆ ಹೋರಾಟ ನಿಲ್ಲುವುದಿಲ್ಲ.

ಇದನ್ನೂ ಓದಿ: ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಯುವತಿಯರ ರಕ್ಷಣೆ, ಇಬ್ಬರ ಬಂಧನ

ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವುದನ್ನು ಕೂಡಲೇ ಕೈಬಿಟ್ಟು ರೈತಪರ, ಕಾರ್ಮಿಕರ ಪರ ಕಾನೂನುಗಳನ್ನು ಜಾರಿಗೆ ತರಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಹೆದ್ದಾರಿ ತಡೆಯಿಂದ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಸಂಚರಿಸುವ ವಾಹನಗಳಿಗೆ ತೊಂದರೆ ಉಂಟಾಯಿತು. ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next